LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮಳಿಗೆಗೆ ಅವಕಾಶ

ಬೆಂಗಳೂರು: ನಮ್ಮ ಹೆಮ್ಮೆಯ ರಾಜ್ಯದ ನಂದಿನಿ ಉತ್ಪನ್ನಗಳನ್ನು ಕಡೆಗಣಿಸಿ, ಬೆಂಗಳೂರಿನ 10 ಮೆಟ್ರೋ ನಿಲ್ದಾಣಗಳಲ್ಲಿ ಅಮೂಲ್ ಮಳಿಗೆಗಳನ್ನು ತೆರೆಯಲು ನಮ್ಮ ಮೆಟ್ರೋ ಮುಂದಾಗಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮೆಟ್ರೋ ನಿಲ್ದಾಣದಲ್ಲಿ 20 ನಂದಿನಿ ಮಳಿಗೆಗಳನ್ನು ರಿಯಾಯಿತಿ ದರದಲ್ಲಿ ತೆರೆಯಲು ಬಿ.ಎಂ.ಆರ್.ಸಿ.ಎಲ್. ಒಪ್ಪಿದೆ.
ಃಒಖಅಐ ಬೆಂಗಳೂರಿನ 10 ಮೆಟ್ರೋ ನಿಲ್ದಾಣಗಳಲ್ಲಿ ಹೊರ ರಾಜ್ಯದ ಅಮೂಲ್ ಸಂಸ್ಥೆಯ ಕಿಯೋಸ್ಕ÷್ಗಳನ್ನು ತೆರೆಯಲು ಅವಕಾಶ ಕೊಟ್ಟಿತ್ತು. ಈ ಬಗ್ಗೆ ಗುಜರಾತ್ ಮಿಲ್ಕ್ ಫೆಡರೇಶನ್ ಜೊತೆ ಒಪ್ಪಂದಕ್ಕೆ ಸಹಿ ಕೂಡ ಹಾಕಿತ್ತು. ರಾಜ್ಯದ ರೈತರ ಹೆಮ್ಮೆಯ ಕೆಎಂಎಫ್ ನಂದಿನಿಗೆ ಮಣೆ ಹಾಕಿರಲಿಲ್ಲ.
ಬಿ.ಎಂ.ಆರ್.ಸಿ.ಎಲ್. ನಿರ್ಧಾರದ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರಗೊಂಡ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಮಧ್ಯೆ ಪ್ರವೇಶಿಸಿ, ಬಿ.ಎಂ.ಆರ್.ಸಿ.ಎಲ್.ಗ್ಲೋಬಲ್ ಟೆಂಡರ್ ಕರೆದಿದ್ದÄಂಟು.
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಬಿ.ಎಂ.ಆರ್.ಸಿ.ಎಲ್. ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್ ರಾವ್ ಹಾಗೂ ಕೆಎಂಎಫ್ ಎಂಡಿ ಶಿವಸ್ವಾಮಿ ಉನ್ನತ ಮಟ್ಟದ ಸಭೆ ನಡೆಸಿದ್ದರು. ಡಿ.ಕೆ. ಶಿವಕುಮಾರ್ ಅವರು ಹೇಳಿದಂತೆ 8 ಕಡೆ ನಂದಿನಿ ಮಳಿಗೆಗಳು ಓಪನ್ ಮಾಡಲು ಹಾಗೂ ಸರ್ಕಾರದ ನಿರ್ದೇಶನದಂತೆ 2 ಕಡೆಗಳಲ್ಲಿ ಮಾತ್ರ ಅಮೂಲ್‌ಗೆ ಅವಕಾಶ ನೀಡಲಾಗುವುದು ಎಂದಿದ್ದಾರೆ.
ಕೆಎAಎಫ್‌ನ ಶಿವಸ್ವಾಮಿ ಅವರು ಮಾತನಾಡಿ, ನಗರದ 20 ಮೆಟ್ರೋ ನಿಲ್ದಾಣದಲ್ಲಿ ರಿಯಾಯಿತಿ ದರದಲ್ಲಿ ನಂದಿನಿ ಮಳಿಗೆ ತೆರೆಯಲು ಅವಕಾಶ ಕೊಡ್ತೇವೆ. ಈ ಹಿಂದೆ 2020-22ರ ಅವಧಿಯಲ್ಲಿ ಮೆಟ್ರೋ ನಿಲ್ದಾಣದಲ್ಲಿ ಮಳಿಗೆ ತೆರೆಯಲು ಬಿ.ಎಂ.ಆರ್.ಸಿ.ಎಲ್. ಟೆಂಡರ್ ಕರೆದಿತ್ತು. ಆಗ ಕೆಎಂಎಫ್ ಈ ಟೆಂಡರ್‌ನಲ್ಲಿ ಭಾಗಿ ಆಗಿರಲಿಲ್ಲ. ಮುಂದಿನ ದಿನಗಳಲ್ಲಿ ನಮ್ಮ ಮೆಟ್ರೋ ನಿಲ್ದಾಣದಲ್ಲಿ ನಂದಿನಿ ಮಳಿಗೆ ಕೂಡಾ ಇರಲಿವೆ ಎಂದು ತಿಳಿಸಿದ್ದಾರೆ.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ