LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀವಿದ್ಯಾ ಚೌಡೇಶ್ವರಿ ದೇವಸ್ಥಾನದ ಬಾಲಮಂಜುನಾಥ ಸ್ವಾಮೀಜಿ ವಿರುದ್ಧದ ಪೋಕ್ಸೊ - ಅತ್ಯಾಚಾರ ಪ್ರಕರಣ ರದ್ದು








ಬೆಂಗಳೂರು :  ತುಮಕೂರಿನ ಕುಣಿಗಲ್ (Kunigal) ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿ ಹಂಗರಹಳ್ಳಿಯ ಶ್ರೀವಿದ್ಯಾ ಚೌಡೇಶ್ವರಿ ದೇವಸ್ಥಾನದ  (Sri Vidya Chowdeshwari Temple) ಎನ್ ಮಂಜುನಾಥ್ ಅಲಿಯಾಸ್ ಬಾಲಮಂಜುನಾಥ ಸ್ವಾಮೀಜಿ ವಿರುದ್ಧದ ಪೋಕ್ಸೊ  (Poxo) ಮತ್ತು ಅತ್ಯಾಚಾರ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ (Karnataka High Court) ಶನಿವಾರ ವಜಾಗೊಳಿಸಿದೆ.


ಪೋಕ್ಸೊ ಪ್ರಕರಣ ವಜಾ ಕೋರಿ ಎನ್ ಮಂಜುನಾಥ್ ಅಲಿಯಾಸ್ ಬಾಲಮಂಜುನಾಥ ಸ್ವಾಮೀಜಿ ಮತ್ತು ಅವರ ಆಪ್ತ ಸಹಾಯಕ ಕೆ ಅಭಿಷೇಕ್ ಸಲ್ಲಿಸಿದ್ದ ಅರ್ಜಿ ಮತ್ತು ಬಾಲಮಂಜುನಾಥ ಸ್ವಾಮೀಜಿಗೆ ಜಾಮೀನು ಮಂಜೂರು ಮಾಡಿದ್ದನ್ನು ಪ್ರಶ್ನಿಸಿ ಸಂತ್ರಸ್ತೆ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ, ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪ್ರಕಟಿಸಿದೆ.

“ಅರ್ಜಿದಾರರಾದ ಎನ್ ಮಂಜುನಾಥ್ ಅಲಿಯಾಸ್ ಬಾಲಮಂಜುನಾಥ ಸ್ವಾಮೀಜಿ ಮತ್ತು ಕೆ ಅಭಿಲಾಷ್ ಸಲ್ಲಿಸಿದ್ದ ಅರ್ಜಿಗಳನ್ನು ಪುರಸ್ಕರಿಸಲಾಗಿದ್ದು, ಅವರ ವಿರುದ್ಧದ ಪ್ರಕರಣ ರದ್ದುಪಡಿಸಲಾಗಿದೆ. ಇದರ ಪರಿಣಾಮವಾಗಿ ಈ ಇಬ್ಬರಿಗೆ ಜಾಮೀನು ಮಂಜೂರು ಮಾಡಿದ್ದನ್ನು ಪ್ರಶ್ನಿಸಿ ಸಂತ್ರಸ್ತೆ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಲಾಗಿದೆ” ಎಂದು ನ್ಯಾಯಾಲಯ ಆದೇಶಿಸಿತು. ವಿಸ್ತೃತ ಆದೇಶ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.

ಪ್ರಕರಣದ ಹಿನ್ನೆಲೆ: ಹುಲಿಯೂರು ದುರ್ಗ–ಮಾಗಡಿ ರಸ್ತೆಯಲ್ಲಿರುವ ಕಾಡು ಶನೇಶ್ವರ ದೇವಸ್ಥಾನದಲ್ಲಿ ಅರ್ಚಕ ವೃತ್ತಿ ಮಾಡಿಕೊಂಡಿದ್ದ ಮಂಜುನಾಥ ಸ್ವಾಮೀಜಿ ಅವರ ಬಳಿಕ ಆರೋಗ್ಯ ಸಮಸ್ಯೆಗೆ ಪರಿಹಾರ ಕೇಳಲು ಸಂತ್ರಸ್ತೆಯು 15 ವರ್ಷದವಳಿದ್ದಾಗ ತಂದೆಯ ಜೊತೆ ಮಠಕ್ಕೆ ಹೋಗಿದ್ದರು. ಈ ಸಂದರ್ಭದಲ್ಲಿ ಅಷ್ಟಮಂಗಳ ಪ್ರಾಣಾಸನ ಮಾಡಿಸುವ ವೇಳೆ ಪರಿಸ್ಥಿತಿಯ ಲಾಭ ಪಡೆದು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಆನಂತರ ವಿಡಿಯೊ ಕರೆ ಮಾಡಿ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದರು ಎಂದು ಸಂತ್ರಸ್ತೆ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಹುಲಿಯೂರು ದುರ್ಗ ಪೊಲೀಸರು ಪೋಕ್ಸೊ ಕಾಯಿದೆ ಸೆಕ್ಷನ್ 4 (ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ), ಸೆಕ್ಷನ್ 6 (ಲೈಂಗಿಕ ತೃಷೆ ತೀರಿಸಿಕೊಳ್ಳಲು ಕ್ರೂರ ಪ್ರಯತ್ನ), ಸೆಕ್ಷನ್ 11(iv) (ಲೈಂಗಿಕ ದೌರ್ಜನ್ಯ ಎಸಗಲು ನೀಲಿ ಚಿತ್ರ ತೋರಿಕೆ), ಸೆಕ್ಷನ್ 12 (ಮಗುವಿಗೆ ಲೈಂಗಿಕ ಕಿರುಕುಳ). ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 66(E) (ಖಾಸಗಿತನದ ಉಲ್ಲಂಘನೆ) ಮತ್ತು ಸೆಕ್ಷನ್ 67(A) (ಕೃತ್ಯದ ಚಿತ್ರೀಕರಿಸಿದ ದೃಶ್ಯದ ಹಂಚಿಕೆ); ಐಪಿಸಿ ಸೆಕ್ಷನ್ 376 (ಅತ್ಯಾಚಾರ), 354(A)(1)(i) (ಅಸಹಜ ಲೈಂಗಿಕ ನಡವಳಿಕೆ), 354(A)(1)(ii) (ಲೈಂಗಿಕ ಕೃತ್ಯಕ್ಕೆ ಬೇಡಿಕೆ), ಸೆಕ್ಷನ್ 417ವಂಚನೆ, ಸೆಕ್ಷನ್ 342 (ಅಕ್ರಮ ಬಂಧನ), ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ) ಜೊತೆಗೆ ಸೆಕ್ಷನ್ 34 (ಸಮಾನ ಉದ್ದೇಶ); ಧಾರ್ಮಿಕ ಸಂಸ್ಥೆಗಳ (ದುರ್ಬಳಕೆ ತಡೆ) ಕಾಯಿದೆ ಸೆಕ್ಷನ್ 3 (ಕಾನೂನುಬಾಹಿರ ಚಟುವಟಿಕೆಗಳಿಗೆ ಧಾರ್ಮಿಕ ಸಂಸ್ಥೆಗಳ ದುರ್ಬಳಕೆ), ಶಸ್ತ್ರಾಸ್ತ್ರ ಕಾಯಿದೆ ಸೆಕ್ಷನ್ 30ರ (ಕಾನೂನುಬಾಹಿರವಾಗಿ ಶಸ್ತ್ರಾಸ್ತ್ರ ಬಳಕೆ) ಅಡಿ ಪ್ರಕರಣ ದಾಖಲಿಸಿದ್ದರು.












Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ