ಶಿಕ್ಷಕರ ದಿನಾಚರಣೆ ಅಂಗವಾಗಿ ಇದೇ ಸೆಪ್ಟೆಂಬರ್ ತಿಂಗಳ ಕೊನೆಯ ವಾರದಲ್ಲಿ ಶಿಕ್ಷಣ ರತ್ನ ಪ್ರಶಸ್ತಿ ವಿತರಣಾ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುವುದು. ಎಲ್ಲ ಶಿಕ್ಷಕರು "ಮೊಬೈಲ್ ಬಿಡಿ-ಪುಸ್ತಕ ಹಿಡಿಯಿರಿ" ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳೋಣ.
ಇದೇ ಸಂದರ್ಭದಲ್ಲಿ ಮಾನ್ಯ ಶಿಕ್ಷಣ ಸಚಿವರು, ಶಾಸಕರು, ಇಲಾಖೆ ಉನ್ನತಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತಿ ಇರುತ್ತಾರೆ. ಶಿಕ್ಷಕರಿಗೆ ಸಂಬಂಧಪಟ್ಟ ವಿಚಾರಗಳ ಕುರಿತು ತಜ್ಞರು ವಿಚಾರಗೋಷ್ಠಿ ನಡೆಸಿಕೊಡಲಿದ್ದಾರೆ. ವಿಶೇಷ ಸ್ಮರಣ ಸಂಚಿಕೆಯು ಬಿಡುಗಡೆಯಾಗಲಿದೆ. ಆಸಕ್ತ ಶಿಕ್ಷಕರು ತಮ್ಮ ಸ್ವವಿವರಗಳನ್ನು ಶಿಕ್ಷಣ ರತ್ನ ಪತ್ರಿಕಾ ಕಚೇರಿಗೆ ಕಳುಹಿಸಿಕೊಡಲು ಕೋರಲಾಗಿದೆ.
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ:
ಕೆ ಎಸ್ ವಿಜಯಕುಮಾರ್ - 92431 92802
ಮತ್ತು ಬಿ ಕೆ ಪ್ರಸನ್ನ - 94481 19247
ಹೆಸರು ನೋಂದಾಯಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 20, 2025.
- ವಿಳಾಸ : 554/2, 2ನೇ ಮಹಡಿ,ಸಂಪಿಗೆ ರಸ್ತೆ 13ನೇ ಅಡ್ಡ ರಸ್ತೆ, ಮಲ್ಲೇಶ್ವರ, ಬೆಂಗಳೂರು -03
[email protected]