LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಮಾನ ದುರಂತ: ಅಹಮದಾಬಾದ್‌ಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ

ನವದೆಹಲಿ: ಏರ್​ ಇಂಡಿಯಾ ವಿಮಾನ ಅಪಘಾತ ದುರಂತ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಅಹಮದಾಬಾದ್‌ಗೆ ಭೇಟಿ ನೀಡುವ ನಿರೀಕ್ಷೆಯಿದೆ. ಅಪಘಾತ ಸ್ಥಳ ಹಾಗೂ ಸಿವಿಲ್ ಆಸ್ಪತ್ರೆಗೆ ತೆರಳಿ ಅವರು ಪರಿಶೀಲನೆ ನಡೆಸುವ ಸಾಧ್ಯತೆಯಿದೆ.


ಈ ಬಗ್ಗೆ ಎನ್​ಎನ್​ಐ ವರದಿ ಮಾಡಿದ್ದು, ಪ್ರಧಾನಿ ಅವರು ಅಪಘಾತದಲ್ಲಿ ಮೃತಪಟ್ಟ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿಗೆ ಅಂತಿಮ ನಮನ ಸಲ್ಲಿಸುವ ನಿರೀಕ್ಷೆಯಿದೆ. ಬಳಿಕ ಅವರು ಕೇಂದ್ರ ಮತ್ತು ರಾಜ್ಯ ನಾಯಕರು ಹಾಗೂ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸುವ ನಿರೀಕ್ಷೆಯಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಕೇಂದ್ರ ಸಚಿವರಾದ ಮಿನ್ ರಾಮ್ ನಾಯಕ್, ಸಿ ಆರ್ ಪಾಟೀಲ್ ಅವರು ಪ್ರಧಾನಿ ಅವರೊಂದಿಗೆ ಆಗಮಿಸುವ ನಿರೀಕ್ಷೆಯಿದೆ.


ಗುರುವಾರ ಸಂಜೆ ವಿಮಾನ ಪತನಗೊಂಡ ಸ್ಥಳಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಳಿಕ ನೇರವಾಗಿ ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು. ಅಲ್ಲದೆ, ಗುಜರಾತ್​ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೊಂದಿಗೆ ಸಭೆ ನಡೆಸಿ ಇಡೀ ಘಟನೆಯ ಬಗ್ಗೆ ವಿವರವಾದ ಮಾಹಿತಿ ಪಡೆದಿದ್ದಾರೆ. ದುರಂತದಲ್ಲಿ ಎಷ್ಟು ಮಂದಿ ಮೃತಪಟ್ಟರು ಎಂಬುದನ್ನು ಡಿಎನ್ಎ ಪರೀಕ್ಷೆ ನಡೆಸಿದ ನಂತರ ಘೋಷಿಸಲಾಗುವುದು. ವಿಮಾನದಲ್ಲಿ ಸುಮಾರು 1,25,000 ಲೀಟರ್ ಇಂಧನ ಇತ್ತು. ಪತನದ ಸಂದರ್ಭದಲ್ಲಿ ಇಂಧನ ಹೊತ್ತಿ ಉರಿಯುತ್ತಿದ್ದುದರಿಂದ ಸ್ಥಳದಲ್ಲಿ ಭಾರೀ ಪ್ರಮಾಣದ ತಾಪಮಾನವಿತ್ತು. ಹಾಗಾಗಿ, ಅಲ್ಲಿ ಯಾರನ್ನೂ ಉಳಿಸಲು ಅವಕಾಶವಿರಲಿಲ್ಲ ಎಂದು ಅವರು ತಿಳಿಸಿದ್ದರು.

ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಔಪಚಾರಿಕ ತನಿಖೆಯನ್ನು ಪ್ರಾರಂಭಿಸಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಗುರುವಾರ ದೃಢಪಡಿಸಿದ್ದಾರೆ.


ಗುರುವಾರ 242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತು ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಇಲ್ಲಿನ ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿತ್ತು. ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಅವಘಡ ಸಂಭವಿಸಿದ್ದು, ಒಟ್ಟಾರೆ 265 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ದೇಶ ಕಂಡ ಅತ್ಯಂತ ಭೀಕರ ವಾಯು ದುರಂತ ಇದಾಗಿದೆ.

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ