LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೆಸರಾಂತ ರಂಗನಟ ಸಿ.ಎ.ರಾಮಚಂದ್ರರಾವ್

ಬೆಂಗಳೂರಿನ ರಂಗಭೂಮಿಯಲ್ಲಿ ನಿರಂತರ ಸಂಘಟನೆ ನಟನೆಯಲ್ಲಿ ತೊಡಗಿಸಿಕೊಂಡಿರುವ ಸಿ.ಎ. ರಾಮಚಂದ್ರರಾವ್ ನನಗೆ ಪರಿಚಿತರೇನಲ್ಲ. ಅವರು ಒಂದು ತಿಂಗಳ ಹಿಂದೆ ನಾನು ಮಾಯಸಂದ್ರದ ನಟರು ಟಿ.ನಾಗರಾಜ್ ಬಗೆಗೆ ಬರೆದಿದ್ದ ಕಲಾ ಪರಿಚಯ ಓದಿದ್ದ ಅವರು ಮೆಚ್ಚುಗೆಯ ಮಾತನಾಡಿದರು. ಭಾನುವಾರ ತುಮಕೂರಿನಲ್ಲಿ ನಮ್ಮ ತಂಡದ ನಾಟಕ ಇದೆ ಎಂದು ಕರಪತ್ರ ವ್ಯಾಟ್ಸಪ್ ಮಾಡಿದ್ದರು. ಅದನ್ನು ಪತ್ರಿಕೆಗೆ ವರದಿ ಮಾಡಿದ್ದೆ. ಅದಾಗಿ ಇಂದು ಪೋನ್ ಮಾಡಿ ಜುಲೈ 9ಕ್ಕೆ ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ನಮ್ಮ ಬೆಂಗಳೂರು ತಂಡದಿAದ ಸಂಪೂರ್ಣ ರಾಮಾಯಣ ನಾಟಕ ಇದೆ ಬನ್ನಿ ಎಂದರು. ಕಲಾವಿದ ಡಿ.ವಿ.ನಾಗಮೋಹನ್ ಶ್ರೀ ಅನ್ನಪೂರ್ಣೇಶ್ವರಿ ಕಲಾಸಂಘದಿAದ ಜುಲೈ 4 ರಿಂದ 9ವರೆಗೆ ಹಮ್ಮಿಕೊಂಡಿರುವ ಆರು ದಿನಗಳ ನಾಟಕೋತ್ಸವದಲ್ಲಿ ಇವರ ತಂಡದ ನಾಟಕವಿದೆ. ಅವರ ನಟನೆಯ ಕೆಲವು ವಿಡಿಯೋ ಕಳಿಸಿದರು. ಪೌರಾಣಿಕ ರಂಗಭೂಮಿಯಲ್ಲಿ ತುಂಬಾ ಕೆಲಸ ಮಾಡಿರುವುದು ಅವರು ಕಳಿಸಿದ ಮಾಹಿತಿಯಿಂದ ತಿಳಿದುಬಂತು.
ಇವರು ತುಮಕೂರು ಜಿಲ್ಲೆ ತುಮಕೂರು ತಾಲ್ಲೂಕು ಹೆಬ್ಬೂರು ಹೋಬಳಿ ನಾಗವಲ್ಲಿ ಅಂಚೆ ಚಿಕ್ಕಯನ ಪಾಳ್ಯದ ಶ್ರೀ ಅಪ್ಪುರಾವ್ ಹಾಗೂ ಶ್ರೀಮತಿ ಬೈನಾಬಾಯಿ ಇವರ ಐದನೇ ಸುಪುತ್ರರಾಗಿ ಜನಿಸಿ 12 ವರ್ಷ ಬಾಲಕನಿದ್ದಾಗಲೇ ಗುಬ್ಬಿ ಕಂಪನಿಯ ಹೆಸರಾಂತ ಸಂಗೀತ ನಿರ್ದೇಶಕರಾದ ವಿರುಪಸಂದ್ರ ದಾಸೇಗೌಡರ ಸಂಗೀತ ನಿರ್ದೇಶನದಲ್ಲಿ ಕವಿರತ್ನ ಕಾಳಿದಾಸ ಪೌರಾಣಿಕ ನಾಟಕದಲ್ಲಿ ಬಾಲ ಭೋಜನ ಪಾತ್ರದಲ್ಲಿ ಅಭಿನಯಿಸಿ ರಂಗಪ್ರವೇಶ ಮಾಡಿದರು. ತದನಂತರ ಅದೇ ದಾಸೇಗೌಡರ ಸಂಗೀತ ನಿರ್ದೇಶನದಲ್ಲಿ ಶ್ರೀಕೃಷ್ಣ ಗಾರುಡಿ ನಾಟಕದಲ್ಲಿ ಮೋಹಿನಿ ಪಾತ್ರದಲ್ಲಿ ಅಭಿನಯಿಸಿ ಪಾಂಡು ವಿಜಯ ನಾಟಕದಲ್ಲಿ ಅರ್ಜುನ ಪಾತ್ರ ಹತ್ತು ಬಾರಿ ಮಾಡಿದ್ದಾರೆ.


ಅಂದಿನ ಕಾಲಕ್ಕೆ ಸುತ್ತಮುತ್ತಲ ಹಳ್ಳಿಗಾಡಿನ ಜನರ ಮನಸೂರೆಗೊಂಡ ನಾಟಕ ಇದು. ಕುರುಕ್ಷೇತ್ರದಲ್ಲಿ ನಾಟಕದಲ್ಲಿ ಶ್ರೀಕೃಷ್ಣ, ಅರ್ಜುನ, ದುರ್ಯೋಧನ, ಭೀಮ, ಕರ್ಣ, ಅಭಿಮನ್ಯು ಈ ಒಂದೊAದು ಪಾತ್ರವನ್ನು ಹಲವು ಬಾರಿ ಮಾಡಿದ್ದಾರೆ. ರಾಮಾಯಣದಲ್ಲಿ ದಶರಥ, ಶ್ರೀರಾಮ, ಆಂಜನೇಯ, ರಾವಣ, ಭರತ ಇಷ್ಟು ಪಾತ್ರಗಳನ್ನು ಸಹ ಹಲವು ಬಾರಿ ಮಾಡಿದ್ದಾರೆ. ರಾಜ ವಿಕ್ರಮ ನಾಟಕದಲ್ಲಿ ವಿಕ್ರಮ, ಶನೇಶ್ವರನ ಪಾತ್ರಗಳನ್ನು, ದಾನ ಶೂರ ವೀರ ಕರ್ಣ ನಾಟಕದಲ್ಲಿ ಭೀಮನ ಪಾತ್ರ ಮಾಡಿದ್ದಾರೆ. 1985ರಲ್ಲಿ ಮಾರುತಿ ಕಲಾ ಬಳಗ, ಎಲೆಕ್ಟಾçನಿಕ್ ಸಿಟಿ ಎಂಬ ಸಂಘ ಸ್ಥಾಪಿಸಿ, ಈ ಸಂಘದಿ0ದ ಕಳೆದ 25 ವರ್ಷಗಳಿಂದ ಅನೇಕ ನಾಟಕಗಳನ್ನು ಕರ್ನಾಟಕದ್ಯಾಂತ ಎಲ್ಲಾ ಜಿಲ್ಲೆಗಳಲ್ಲಿ ಪ್ರದರ್ಶನ ಮಾಡಿ ಜನಮನ ಸೆಳದಿದ್ದಾರೆ. ತಮ್ಮ ಮಾರುತಿ ಕಲಾಬಳಗದಲ್ಲಿ ಸಾವಿರಾರು ಕರ್ನಾಟಕದ ಎಲ್ಲಾ ಜಿಲ್ಲೆಯ ಕಲಾವಿದರಿಗೂ ನಟಿಸಲು ಅವಕಾಶ ಕಲ್ಪಿಸಿದ್ದಾರೆ. ನಲ್ಲಾತಂಗ ಎಂಬ ನಾಟಕದಲ್ಲಿ ರಾಮಸಿಂಹ, ವಂಗರಾಜ, ನಲರಾಜ ವಿಜಯಸಿಂಗ, ಶ್ರೀ ಶನೇಶ್ವರನ ಪಾತ್ರಗಳನ್ನು ಒಂದೊAದು 25 ಬಾರಿ ಅಭಿನಯಿಸಿದ್ದಾರೆ.


ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ 2007ರಿಂದ ಈವರೆಗೆ 150 ನಾಟಕಗಳನ್ನು ಪ್ರದರ್ಶಿಸಿದ್ದಾರೆ. ತುಮಕೂರು ಗುಬ್ಬಿ ವೀರಣ್ಣ ರಂಗಮAದಿರದಲ್ಲಿ 50 ಪ್ರದರ್ಶನಗಳಾಗಿವೆ. ಪ್ರಚಂಡ ರಾವಣ ನಾಟಕದಲ್ಲಿ ರಾವಣ, ಆಂಜನೇಯ ಪಾತ್ರಗಳಲ್ಲಿ ಅನೇಕ ಬಾರಿ ನಟಿಸಿದ್ದಾರೆ. ಸುಭದ್ರ ಕಲ್ಯಾಣ ನಾಟಕದಲ್ಲಿ ಅರ್ಜುನ ಪಾತ್ರದಲ್ಲಿ ರವೀಂದ್ರ ಕಲಾಕ್ಷೇತ್ರದಲ್ಲಿ ಅಭಿನಯಿಸಿದ್ದಾರೆ.


ಇದೇ ರವೀಂದ್ರ ಕಲಾಕ್ಷೇತ್ರದಲ್ಲಿ ತಾ. 3-2-2025ರಂದು ಭಾರತದ ಎರಡು ಮಹಾಕಾವ್ಯ ರಾಮಾಯಣ ಮಹಾಭಾರತ ಆಧರಿಸಿ ಹೆಸರಾಂತ ರಂಗ ಕಲಾವಿದರು ರಂಗಶ್ರೀ ರಂಗಸ್ವಾಮಿ ಅವರ ಪರಿಕಲ್ಪನೆಯಲ್ಲಿ ಹೆಸರಾಂತ ರಂಗಕರ್ಮಿ ಎಸ್.ಎಲ್.ಎನ್.ಸ್ವಾಮಿ ನಿರ್ದೇಶನದಲ್ಲಿ ಪ್ರದರ್ಶನಗೊಂಡ ಯುಗೇ ಯುಗೇ ಪೌರಾಣಿಕ ನಾಟಕವು ಇಂಡಿಯನ್ ಬುಕ್ ಆಫ್ ರೆಕಾರ್ಡ್ನಲ್ಲಿ ದಾಖಲಾಗಿದೆ.


ಈ ನಾಟಕದಲ್ಲಿ ತ್ರೇತ ದ್ವಾಪರ ಯುಗಗಳ ರಾವಣ ದುರ್ಯೋಧನ ಒಂದೇ ವೇದಿಕೆಯಲ್ಲಿ ಬರುವ ಈ ಎರಡೂ ಪಾತ್ರಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಬೆಂಗಳೂರಿನ ಪುರಭವನದಲ್ಲಿ 2013ರಲ್ಲಿ ಸತತ 108 ಗಂಟೆಗಳ ಕಾಲ ಪ್ರದರ್ಶಿತ ಸಮಗ್ರ ಮಹಾಭಾರತ ಪೌರಾಣಿಕ ನಾಟಕದಲ್ಲಿ ಬಬ್ರುವಾಹನ ಪಾತ್ರ ನಿರ್ವಹಿಸಿದ್ದಾರೆ. ಇವರಿಗೆ ಹಲವಾರು ಕಲಾವಿದರು ಸಂಘ ಸಂಸ್ಥೆಗಳು ಹಲವು ಬಿರುದುಗಳೊಂದಿಗೆ ಸನ್ಮಾನಿಸಿವೆ. ಈವರೆಗೆ 250 ನಾಟಕಗಳನ್ನು ಶ್ರೀ ಮಾರುತಿ ಕಲಾ ಬಳಗದಿಂದ ಪ್ರದರ್ಶನ ಕೊಟ್ಟಿದ್ದಾರೆ.


ತುಮಕೂರು ಸಿದ್ಧಗಂಗಮಠದಲ್ಲಿ ಬಿಕಾಂ ಪದವಿ ಮಾಡಿರುವ ಇವರು ಬೆಂಗಳೂರಿನ ಎಲೆಕ್ಟಾçನಿಕ್ ಸಿಟಿಯಲ್ಲಿ ಸನ್ ವೇರ್ ಗ್ರೂಪ್ ಆಫ್ ಕಂಪನೀಸ್ ಎಚ್.ಆರ್. ಮೇನೇಜರ್ ಆಗಿ 16 ವರ್ಷ ಸೇವೆ ಸಲ್ಲಿಸಿ ಈಗ ಜೆಡಿಎಸ್ ಪಕ್ಷದ ಬೆಂಗಳೂರು ಮಹಾನಗರ ಪ್ರಧಾನ ಕಾರ್ಯದರ್ಶಿ. ನಾನು ರೈತ ಕುಟುಂಬದಿAದ ಬಂದು ಈಗಲೂ ಹಳ್ಳಿಗೆ ಹೋಗಿ ಕೃಷಿ ಕೆಲಸ ಮಾಡುತ್ತೇನೆ, ನನ್ನ ಜೀವಿತ ಕಾಲದಲ್ಲಿ ಇನ್ನೂ 250 ನಾಟಕಗಳನ್ನು ಅಭಿನಯಿಸುವ ಅಭಿಲಾಷೆ ಇದೆ ಎನ್ನುತ್ತಾರೆ,
--
ಗೊರೂರು ಅನಂತರಾಜು, ಹಾಸನ.
ಮೊ: 9449462879.


[embed]https://www.youtube.com/watch?v=YIm55TxhhfM[/embed]
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ