LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜನವರಿ 2 ರಂದು ರೂಪ ಅಯ್ಯರ್ ನಿರ್ದೇಶನದ 'ಆಜಾದ್ ಭಾರತ್' ಚಿತ್ರ ದೇಶದಾದ್ಯಂತ ಬಿಡುಗಡೆ .

BENGALURU : ಇದು ಕನ್ನಡಗರಿಂದ ನಿರ್ಮಾಣವಾಗಿರುವ ದೇಶಪ್ರೇಮ ಸಾರುವ ಹಿಂದಿ ಚಿತ್ರ . ನಟಿಯಾಗಿ, ನಿರ್ದೇಶಕಿಯಾಗಿ ಅಷ್ಟೇ ಅಲ್ಲದೆ ಸಮಾಜಮುಖಿ ಕಾರ್ಯಗಳ ಮೂಲಕವೂ ಗುರುತಿಸಿಕೊಂಡಿರುವ ರೂಪ ಅಯ್ಯರ್ (Roopa Iyer) ನಿರ್ದೇಶನದ "ಆಜಾದ್ ಭಾರತ್" (AZAD BHARAT)ಹಿಂದಿ ಚಿತ್ರ ಜನವರಿ 2 ರಂದು ದೇಶದಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

'ನೀರಾ ಆರ್ಯ' ಎಂಬ ಹೆಸರಿನಿಂದ ಆರಂಭವಾದ ಈ ಚಿತ್ರದ ಶೀರ್ಷಿಕೆಯನ್ನು "ಆಜಾದ್ ಭಾರತ್" ಎಂದು ಬದಲಿಸಲಾಗಿದೆ. ಈ ಚಿತ್ರವನ್ನು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಅರ್ಪಣೆ ಮಾಡಲಾಗಿದೆ.‌ ಸುಭಾಷ್ ಚಂದ್ರ ಬೋಸ್ ಸ್ಥಾಪಿಸಿದ್ದ ಮೊದಲ ಮಹಿಳಾ ಆರ್ಮಿಯ ಕಥೆ 'ಆಜಾದ್ ಭಾರತ್' ಚಿತ್ರದಲ್ಲಿದೆ. ನೇತಾಜಿ ಪಾತ್ರದಲ್ಲಿ ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆ ಬಣ್ಣ ಹಚ್ಚಿದ್ದಾರೆ. ಈ ಚಿತ್ರದಲ್ಲಿ ಮೂರು ಮಹಿಳಾ ಮುಖ್ಯ ಪಾತ್ರಗಳಿದ್ದು, ನಾನು ನೀರಾ ಆರ್ಯ ಪಾತ್ರದಲ್ಲಿ, ಹಿತ ಚಂದ್ರಶೇಖರ್ ದುರ್ಗಾ ಪಾತ್ರದಲ್ಲಿ ನಟಿಸಿದ್ದೇವೆ. ಸರಸ್ವತಿ ರಾಜಾಮಣಿ ಎಂಬ ಪಾತ್ರದಲ್ಲಿ ಜನಪ್ರಿಯ ನಟಿಯೊಬ್ಬರು ಕಾಣಿಸಿಕೊಂಡಿದ್ದಾರೆ. ಸುರೇಶ್ ಒಬೆರಾಯ್, ಬಿರಾದಾರ್, ಸುಚೇಂದ್ರ ಪ್ರಸಾದ್, ಜೀ ವಾಹಿನಿಯ ಮುಖ್ಯಸ್ಥರಾದ ಸುಭಾಷ್ ಚಂದ್ರ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸಂಗೀತ ನಿರ್ದೇಶನವನ್ನು ನನ್ನ ಪತಿ ಗೌತಮ್ ಶ್ರೀವತ್ಸ ಮಾಡಿದ್ದಾರೆ. ಶ್ರಿ ಕ್ರೇಜಿ ಮೈಂಡ್ಸ್ ಅವರ ಸಂಕಲನವಿರುವ ಈ ಚಿತ್ರವನ್ನು ನಾನು, ಜಯಗೋಪಾಲ್ ಹಾಗೂ ರಾಜೇಂದ್ರ ರಾಜನ್ ನಿರ್ಮಿಸಿದ್ದೇವೆ. ಜನವರಿ ತಿಂಗಳನ್ನು ಸುಭಾಷ್ ಚಂದ್ರ ಬೋಸ್ ಅವರ ಜನ್ಮ ಮಾಸ ಎಂದು ಆಚರಿಸುತ್ತಾರೆ. ಹಾಗಾಗಿ ಜನವರಿ ಎರಡನೇ ತಾರೀಖು ಈ ಚಿತ್ರವನ್ನು ತೆರೆಗೆ ತರುತ್ತಿದ್ದೇವೆ. ಈ ಚಿತ್ರವನ್ನು ನಿರ್ಮಾಣ ಮಾಡುವ ಮೊದಲು ಸುಭಾಷ್ ಚಂದ್ರ ಬೋಸ್ ಅವರ ಕುಟುಂಬದವರನ್ನು ಸಂಪರ್ಕ ಮಾಡಿ ಅನೇಕ ಮಾಹಿತಿ ಪಡೆದುಕೊಂಡಿದ್ದೇನೆ. ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರಿಗೆ ಈ ಚಿತ್ರ ತೋರಿಸುವ ಯೋಚನೆ ಇದೆ. 2026 ರ ಜನವರಿ 2 ರಂದು ಜೀ ಸ್ಟುಡಿಯೋಸ್ ಮೂಲಕ ಈ ಚಿತ್ರ ಬಿಡುಗಡೆಯಾಗುತ್ತಿದೆ‌ ಎಂದು ನಿರ್ಮಾಪಕಿ, ನಟಿ ನಿರ್ದೇಶಕಿ ರೂಪಾ ಅಯ್ಯರ್ ತಿಳಿಸಿದರು.

ರೂಪಾ ಅಯ್ಯರ್ ಅವರು ಒಂದು ಕಾಲದ ಹೇಳದೇ ಹೋದ ಘಟನೆಗಳನ್ನು ತೆರೆಯ ಮೇಲೆ ಹೇಳಲು ಹೊರಟ್ಟಿದ್ದಾರೆ. ಇದಕ್ಕಾಗಿ ಬಹಳ ವರ್ಷಗಳ ಪ್ರಯತ್ನ ಪಟ್ಟಿದ್ದಾರೆ. ಇದಕ್ಕೆಲ್ಲಾ ಮುಖ್ಯ ಕಾರಣ ಅವರ ರಾಷ್ಟ್ರಪ್ರೇಮ. ಎಲ್ಲರೂ ಈ ಚಿತ್ರ ನೋಡಿ ಎಂದರು ಹಿರಿಯ ನಟ ಸುಚೇಂದ್ರ ಪ್ರಸಾದ್.

ಇಂತಹ ದೇಶಪ್ರೇಮ ಸಾರುವ ಚಿತ್ರದಲ್ಲಿ ನಟಿಸಿದ್ದು ಖುಷಿಯಾಗಿದೆ. ದುರ್ಗಾ ಪಾತ್ರದಲ್ಲಿ ಅಭಿನಯಿಸಿರುವುದಾಗಿ ನಟಿ ಹಿತ ಚಂದ್ರಶೇಖರ್ ಹೇಳಿದರು.

ಚಿತ್ರದಲ್ಲಿ ಏಳು ಹಾಡುಗಳಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತ ಫಡ್ನವಿಸ್ ಅವರು ನಮ್ಮ ಚಿತ್ರದ ಹಾಡೊಂದನ್ನು ಹಾಡಿದ್ದಾರೆ. ಯಶ್ ರಾಜ್ ಸ್ಟುಡಿಯೋದಲ್ಲಿ ರೀರೆಕಾರ್ಡಿಂಗ್ ನಡೆದಿದೆ ಎಂದರು ಸಂಗೀತ ನಿರ್ದೇಶಕ ಗೌತಮ್ ಶ್ರೀವತ್ಸ.

ನಿರ್ಮಾಪಕ ಜಯಗೋಪಾಲ್ ಹಾಗೂ ಸಂಕಲನಕಾರ ಶ್ರೀ ಕ್ರೇಜಿಮೈಂಡ್ಸ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ