LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತೀಯರ ಕೆಲಸದ ವೀಸಾ ಸ್ಥಗಿತಗೊಳಿಸಿದ ಸೌದಿ ಅರೇಬಿಯಾ

ಸೌದಿ ಅರೇಬಿಯಾ ಜಾಗತಿಕ ಕಾರ್ಮಿಕ ಮಾರುಕಟ್ಟೆಯಲ್ಲಿ ಭಾರೀ ಅನಿಶ್ಚಿತತೆಯನ್ನು ಸೃಷ್ಟಿಸಿದೆ. ಭಾರತ, ಪಾಕ್, ಬಾಂಗ್ಲಾದೇಶ, ನೈಜೀರಿಯಾ ಸೇರಿದಂತೆ ೧೪ ದೇಶಗಳ ನಾಗರಿಕರಿಗೆ ಕೆಲಸದ ವೀಸಾ (ಬ್ಲಾಕ್ ವರ್ಕ್ ವೀಸಾ) ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಿದೆ. ೨೦೨೫ರ ಜೂನ್‌ವರೆಗೆ ಈ ನಿರ್ಧಾರವು ಜಾರಿಯಲ್ಲಿರಲಿದೆ ಎಂದು ವರದಿಗಳು ತಿಳಿಸಿದ್ದು, ಹೊರ ದೇಶದ ಕಾರ್ಮಿಕರಲ್ಲಿ ಗೊಂದಲ ಮತ್ತು ಆತಂಕವನ್ನು ಉಂಟುಮಾಡಿದೆ.


ಸೌದಿ ಮಾನವ ಸಂಪನ್ಮೂಲ ಮತ್ತು ಸಾಮಾಜಿಕ ಅಭಿವೃದ್ಧಿ ಸಚಿವಾಲಯವು ಈ ನಿರ್ಧಾರವನ್ನು ಘೋಷಿಸಿರುವುದು. ಕಾರ್ಮಿಕ ನಿರ್ವಹಣಾ ವೇದಿಕೆಯಾದ `ಕಿವಾ'ದಿಂದ ಬ್ಲಾಕ್ ವೀಸಾ ಅರ್ಜಿ ಸೌಲಭ್ಯವನ್ನು ತೆಗೆದುಹಾಕಲಾಗಿದೆ. ಈ ವೀಸಾಗಳು ಕಂಪನಿಗಳಿಗೆ ಬೃಹತ್ ಪ್ರಮಾಣದಲ್ಲಿ ಉದ್ಯೋಗಿಗಳ ನೇಮಿಸಿಕೊಳ್ಳಲು ಸಹಾಯಕವಾಗಿದ್ದವು ಎನ್ನಲಾಗಿದೆ. ಆದರೆ, ಈಗ ೧೪ ದೇಶಗಳಿಂದ ಕಾರ್ಮಿಕರನ್ನು ತರಲು ಕಂಪನಿಗಳಿಗೆ ಸಾಧ್ಯವಾಗದಿರುವುದರಿಂದ, ವಿಶೇಷವಾಗಿ ನಿರ್ಮಾಣ, ಆತಿಥ್ಯ ಮತ್ತು ಸೇವಾ ಕ್ಷೇತ್ರಗಳು ಗಂಭೀರ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ.
ವಿದೇಶಿ ಕಾರ್ಮಿಕರನ್ನು ಅವಲಂಬಿಸಿರುವ ಕಂಪನಿಗಳಿಗೆ ತಕ್ಕಮಟ್ಟಿನ ಸಮಸ್ಯೆಗಳು ಎದುರಾಗಿವೆ. ವಿಶೇಷವಾಗಿ, ಸೌದಿಯ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರವಹಿಸುವ ನಿರ್ಮಾಣ ವಲಯಕ್ಕೆ ಈ ನಿರ್ಬಂಧವು ಕೂಡಾ ದೊಡ್ಡ ಹಿನ್ನಡೆಯಾಗಿದೆ ಎನ್ನಬಹುದು. ಈ ಕ್ರಮದ ಹಿಂದಿನ ನಿಖರ ಕಾರಣವನ್ನು ಸೌದಿ ಅರೇಬಿಯಾದ ಸ್ಪಷ್ಟವಾಗಿ ಬಹಿರಂಗಪಡಿಸಿಲ್ಲ. ಆದರೆ, ಇದು `ವಿಷನ್ ೨೦೩೦’ ಯೋಜನೆಯ ಭಾಗವಾಗಿ ಸ್ಥಳೀಯ ನಾಗರಿಕರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಕೈಗೊಂಡಿರಬಹುದು ಎಂದು ಕೆಲವರ ಅಭಿಪ್ರಾಯ. ಪ್ರವಾಸೋದ್ಯಮ, ಚಿಲ್ಲರೆ ವ್ಯಾಪಾರ, ಇತರ ಕ್ಷೇತ್ರಗಳಲ್ಲಿ ಸೌದಿ ನಾಗರಿಕರ ಭಾಗವಹಿಸುವಿಕೆ ಉತ್ತೇಜಿಸುವ ಗುರಿ ಈ ಯೋಜನೆ ಹೊಂದಿರಲಿದೆ. ಭಾರತೀಯ ಕಾರ್ಮಿಕರಿಗೆ ಇದೊಂದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಗಲ್ಫ್ ರಾಷ್ಟçಗಳಲ್ಲಿ ಉದ್ಯೋಗಕ್ಕಾಗಿ ಸೌದಿಯನ್ನೇ ಅವಲಂಬಿಸಿರುವ ಹಲವು ಭಾರತೀಯರಿಗೆ ಈ ನಿರ್ಬಂಧವು ಆರ್ಥಿಕ ಸಂಕಷ್ಟ ಉಂಟುಮಾಡಬಹುದು. ಭಾರತವು ಈ ನಿಟ್ಟಿನಲ್ಲಿ ಸೌದಿ ಅಧಿಕಾರಿಗಳೊಂದಿಗೆ ಸೂಕ್ತ ಚರ್ಚೆ ನಡೆಸಿ, ಸಮಸ್ಯೆಗೆ ಪರಿಹಾರ ಕಂಡುಹಿಡಿಯುವ ಪ್ರಯತ್ನ ನಡೆಯುತ್ತಿದೆ.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ