LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಾನವನ ಜೀವನ, ಬದುಕು, ಸಾರ್ಥಕತೆಯ ಮೌಲ್ಯಗಳ ಸಂದೇಶ ಸಾರಿದ ಶ್ರೀ ಕೃಷ್ಣ ಭಾರತದ ಆಧಾರ ಸ್ತಂಭ

ಚಾಮರಾಜನಗರ: ಭಾರತದ ಸನಾತನ ಧರ್ಮದ ಶ್ರೇಷ್ಠ ಗ್ರಂಥವಾದ ಭಗವದ್ಗೀತೆಯನ್ನು ನೀಡಿ ಸಹಸ್ರ ಸಹಸ್ರ ವರ್ಷಗಳ ಕಾಲ ಮಾನವನ ಜೀವನ, ಬದುಕು, ಸಾರ್ಥಕತೆಯ ಮೌಲ್ಯಗಳ ಸಂದೇಶವನ್ನು ಸಾರಿದ ಭಗವಂತನಾದ ಶ್ರೀ ಕೃಷ್ಣ ಭಾರತದ ಆಧಾರ ಸ್ತಂಭವೆಂದು ಶ್ರೀಕೃಷ್ಣ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಸಂಸ್ಕೃತ ಸಂಸ್ಕೃತಿ ಚಿಂತಕರಾದ ಸುರೇಶ್ ಎನ್ ಋಗ್ವೇದಿ ತಿಳಿಸಿದರು.

ಅವರು ಶ್ರೀಕೃಷ್ಣ ಪ್ರತಿಷ್ಠಾನ ರಥದ ಬೀದಿಯಲ್ಲಿ ಹಮ್ಮಿಕೊಂಡಿದ್ದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಚಾಮರಾಜನಗರ ಜಿಲ್ಲೆಯಲ್ಲಿ ಶ್ರೀ ಕೃಷ್ಣಪ್ರಜ್ಞೆಯನ್ನು 2010 ರಿಂದ ಮೊಸರು ಮಡಿಕೆ ಒ ಡೆಯುವ ಉತ್ಸವ, ಬಲರಾಮ ಜಯಂತಿ ,ರಾಧಾ ಜಯಂತಿ, ಶ್ರೀ ಕೃಷ್ಣ ಜಯಂತಿ ಆಚರಿಸುವ ಮೂಲಕ ಆಧ್ಯಾತ್ಮಿಕ ಜಾಗೃತಿ ಹಾಗೂ ಮಾನವನ ಕಲ್ಯಾಣಕ್ಕೆ ಹಾಗೂ ಪ್ರತಿಭಾವಿಕಾಸಕ್ಕೆ ಹಲವಾರು ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಆಗಸ್ಟ್ 31ರ ಭಾನುವಾರ.
ರಥದ ಬೀದಿಯಲ್ಲಿ ಬೃಹತ್ ಮೊಸರು ಮಡಿಕೆ ಒಡೆಯುವ ಉತ್ಸವವನ್ನು ಆಯೋಜಿಸಲಾಗಿದೆ. ತಮಿಳುನಾಡು ,ಕರ್ನಾಟಕದ ವಿವಿಧ ಕಡೆಯಿಂದ ಮೊಸರು ಮಡಿಕೆ ಒಡೆಯುವ ಉತ್ಸವದ ತಂಡಗಳು ಆಗಮಿಸಲಿವೆ.
ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಮಡಿಕೆ ಒಡೆಯುವ ಉತ್ಸವದ ಅಂಗವಾಗಿ ಶ್ರೀ ಕೃಷ್ಣ ಕವನ ಸ್ಪರ್ಧೆ, ಶ್ರೀಕೃಷ್ಣ ಕೆಸರುಗದ್ದೆ ಓಟ ಶ್ರೀ ಕೃಷ್ಣ ಕಬಡ್ಡಿ ಸ್ಪರ್ಧೆ, ಶ್ರೀ ಕೃಷ್ಣ ಹೂ ಕಟ್ಟುವ ಸ್ಪರ್ಧೆ, ಹಮ್ಮಿಕೊಳ್ಳುವ ಜೊತೆಗೆ ದೇಶಿಯ ಆಟಗಳ ಜಾಗೃತಿ ಕಾರ್ಯಕ್ರಮವನ್ನು ರೂಪಿಸಲಾಗಿದೆ.

20ಅಡಿ ಎತ್ತರದ ಕಂಬಕ್ಕೆ ಕಟ್ಟಿರುವ ಮಡಿಕೆ ಯಲ್ಲಿ ಬೆಣ್ಣೆ ಹಾಗೂ ಮೊಸರು ಒಡೆಯುವ ತಂಡಗಳು 15 ಯುವಕರ ಸಂಖ್ಯೆಗೆ ಅನುಗುಣವಾಗಿ ಗುಂಪನ್ನು ರಚಿಸಿಕೊಂಡು ಆಗಮಿಸಬೇಕು. ಮಾರ್ಗದರ್ಶನಕ್ಕಾಗಿ 9902317670 ಸಂಪರ್ಕಿಸಬೇಕೆಂದು ತಿಳಿಸಿದರು.
ಶ್ರೀ ಕೃಷ್ಣ ಜನ್ಮಾಷ್ಟಮಿಯ ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಪ್ರತಿಷ್ಠಾನದ ಪ್ರದೀಪ್ ಕುಮಾರ್ ದೀಕ್ಷಿತ್, ಯುವ ಮುಖಂಡರಾದ ಚಂದ್ರಶೇಖರ್ ,ಬೆಂಗಳೂರಿನ ಸತೀಶ್, ಬಿಕೆ ಆರಾಧ್ಯ, ರಾಮಪ್ರಸಾದ್, ಸತೀಶ್, ವಿನೋದ್, ಹರದನಹಳ್ಳಿ ಉಮೇಶ್ ಮತ್ತು ವಾಸು ಉಪಸ್ಥಿತರಿದ್ದರು.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ