LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಂತೂ ಇಂತು ಮುಕ್ತಿ ಸಿಕ್ತು ಹೆಬ್ಬಾಳ ಫ್ಲೈಓವರ್!!! ಲೋಕಾರ್ಪಣೆ ಮಾಡಿದ ಸಿದ್ದರಾಮಯ್ಯ: ಡಿಕೆ ಶಿವಕುಮಾರ್!!!

ಹೆಬ್ಬಾಳ ನೂತನ ಮೇಲ್ಸೇತುವೆಯನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಲೋಕಾರ್ಪಣೆ ಮಾಡಿದರು. ಏ.ಖ.ಪುರಂನಿಂದ ಮೇಖ್ರಿ ಸರ್ಕಲ್ ಕಡೆ ಸಂಪರ್ಕಿಸುವ 700 ಮೀಟರ್ ಉದ್ದದ ಹೊಸ ಮೇಲ್ಸೇತುವೆಯನ್ನು 80 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಈ ವೇಳೆ ಸಚಿವರಾದ ಭೈರತಿ ಸುರೇಶ್, ಕೃಷ್ಣಭೈರೇಗೌಡ, ಶಾಸಕರಾದ ಎಸ್.ಆರ್.ವಿಶ್ವನಾಥ್, ಹ್ಯಾರಿಸ್, ನಟಿ ರಮ್ಯಾ ಉಪಸ್ಥಿತರಿದ್ದರು.
ಬಿಡಿಎ ಕಳೆದ 2 ವರ್ಷಗಳಿಂದ ಹೆಬ್ಬಾಳ ವಿಸ್ತರಿತ ಫ್ಲೈ ಓವರ್ ಕಾಮಗಾರಿ ನಡೆಸುತ್ತಾ ಇತ್ತು ಇದರ ಕಾಮಗಾರಿ ಪೂರ್ಣಗೊಂಡಿದೆ. ಇಂದು ಹೆಬ್ಬಾಳ ಪ್ಲೈ ಓವರ್ ಉದ್ಘಾಟನೆ ಮಾಡಲಾಗ್ತಿದೆ. ಉದ್ಘಾಟನೆಗೆ ಸಿದ್ಧತೆ ಆಗಿದ್ದು ಫ್ಲೈಓವರ್‍ಗೆ ಹೂವಿನ ಹಾರ ಹಾಕಿ ಸಿಂಗಾರ ಮಾಡಲಾಗಿದೆ. 700 ಮೀಟರ್ ಉದ್ದದ ಈ ಫ್ಲೈ ಓವರ್‍ನಿಂದ ಕೆ.ಆರ್ ಪುರಂ ಕಡೆಯಿಂದ ಮೇಖ್ರಿ ಸರ್ಕಲ್ ಕಡೆಗೆ ಸಾಗಲಿದೆ.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಬರುವುದಕ್ಕೆ ದ್ವಿಪಥ ರಸ್ತೆ ಮಾತ್ರ ಇದ್ದು. ಕೆ.ಆರ್ ಪುರ ಕಡೆಯಿಂದ ಬರುವ ರಸ್ತೆ ಇದನ್ನ ಸೇರಿಕೊಳ್ಳುತ್ತದೆ. ವಿಮಾನ ನಿಲ್ದಾಣ ಕಡೆಯಿಂದ ನಗರದ ಕಡೆಗೆ ಪ್ರಯಾಣಿಸುವ ವಾಹನಗಳಿಂದ ಸಂಚಾರ ದಟ್ಟಣೆ ಉಂಟಾಗುತ್ತದೆ. ಈ ಸಂಚಾರ ದಟ್ಟಣೆ ನಿವಾರಿಸಲು ಹೆಬ್ಬಾಳ ಫ್ಲೈಓವರ್ ಬಳ್ಳಾರಿ ರಸ್ತೆ, ವಿಮಾನ ನಿಲ್ದಾಣ ಮತ್ತು ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಹೀಗಾಗಿ, ಹೆಚ್ಚು ಸಂಚಾರ ದಟ್ಟಣೆ ಉಂಟಾಗುತ್ತದೆ. ಫ್ಲೈ ಓವರ್ ಸಂಚಾರಕ್ಕೆ ಮುಕ್ತಗೊಂಡ ನಂತರ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಯಾಗಲಿದೆ.
ಒಟ್ಟಾರೆ ಹೆಬ್ಬಾಳ ವಿಸ್ತರಿತ ಫ್ಲೈ ಓವರ್ ಇಂದು ಉದ್ಘಾಟನೆ ಗೊಂಡಿದ್ದು ಹೆಬ್ಬಾಳ ಸುತ್ತಮುತ್ತ, ಏರ್ ಪೋರ್ಟ್ ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆಗೆ ಕೆಲಮಟ್ಟಿಗೆ ರಿಲೀಫ್ ಸಿಗಲಿದೆ.
ಕೆ.ಆರ್.ಪುರಂ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಸಂಚರಿಸಲು ನಿರ್ಮಿಸಿರುವ ಮೇಲ್ಸೇತುವೆ ಸಿದ್ದರಾಮಯ್ಯ ಅವರೊಂದಿಗೆ ಲೋಕಾರ್ಪಣೆಗೊಳಿಸಲಾಯಿತು. ಹೆಬ್ಬಾಳದ ಹೊಸ ಮೇಲ್ಸೇತುವೆ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ಮುಕ್ತಗೊಂಡಿದೆ. 80 ಕೋಟಿ ರೂ. ವೆಚ್ಚದಲ್ಲಿ 700 ಮೀಟರ್ ಉದ್ದದ ಹೆಬ್ಬಾಳ ಫ್ಲೈಓವರ್ ನಿರ್ಮಾಣದಿಂದ ಹೆಬ್ಬಾಳದ ಟ್ರಾಫಿಕ್ ದಟ್ಟಣೆ ನಿವಾರಣೆಯಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.
ಇದೇ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹೆಬ್ಬಾಳ ಮೇಲ್ಸೇತುವೆಯಲ್ಲಿ ನನ್ನ ಯೆಜ್ಡಿ ರೋಡ್‍ಕಿಂಗ್ ಬೈಕ್ ಸವಾರಿ ಮಾಡುವ ಮೂಲಕ ಕಾಲೇಜು ದಿನಗಳನ್ನು ಮೆಲುಕು ಹಾಕಿದ್ದಿದೆ. ಬೆಂಗಳೂರಿನ ನಾಗರಿಕರೇ, ಜಾಗತಿಕವಾಗಿ ಗುರುತಿಸಿಕೊಂಡಿರುವ ನಮ್ಮ ಬೆಂಗಳೂರು ನಗರಕ್ಕೆ ಹೊಸರೂಪವನ್ನು ನೀಡಲು ನಾವು ಬದ್ಧರಿದ್ದೇವೆ ಎಂದಿದ್ದಾರೆ.


ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಹ್ಯಾರಿಸ್‍ರವರು, ಕೃಷ್ಣ ಬೈರೇಗೌಡರವರು ಹಾಗೂ ನಗರಾಭಿವೃದ್ಧಿ ಸಚಿವರು ಹಾಗೂ ಹೆಬ್ಬಾಳ ಕ್ಷೇತ್ರದ ಜನಪ್ರಿಯ ಶಾಸಕ ಬೈರತಿ ಸುರೇಶ ಸಮ್ಮುಖದಲ್ಲಿ ಹೆಬ್ಬಾಳ ಮೇಲ್ಚೇತುವೆಯ ಅನಾವರಣ ಕಾರ್ಯಕ್ರಮಯಶಸ್ವಿಯಾಗಿ ನೆರವೇರಿತು. ಈ ಸಂದರ್ಭದಲ್ಲಿ ಅನೇಕನೇಕ ನಮ್ಮ ಕಾಂಗ್ರೆಸ್ ಪಕ್ಷದ ನಾಯಕರು ಕಾರ್ಯಕರ್ತರುಗಳು ಹಾಗೂ ಸ್ಥಳೀಯ ನಾಗರೀಕರ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ಮೇಲ್ ಸೇತುವೆಯನ್ನು ಲೋಕಾರ್ಪಣೆ ಗೊಳಿಸಲಾಗಿದೆ.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ