LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನೌಕರರ ಭವಿಷ್ಯ ನಿಧಿ: ಹೈಯರ್ ಪೆನ್ಷನ್ ಸಮಸ್ಯೆಗೆ ಶೀಘ್ರ ಪರಿಹಾರ: ಸಚಿವೆ ಶೋಭಾ ಕರಂದ್ಲಾಜೆ ಭರವಸೆ

ಬೆಂಗಳೂರು : ನೌಕರರ ಭವಿಷ್ಯ ನಿಧಿ ಯೋಜನೆ ಅಡಿ ಬರುವ "ಹೈಯರ್ ಪೆನ್ಷನ್ ಸ್ಕೀfಮ್" ನಲ್ಲಿ ಉಂಟಾಗಿರುವ ಸಮಸ್ಯೆಯನ್ನು ಅತಿ ಶೀಘ್ರವಾಗಿ ಪರಿಹಾರ ಮಾಡುವುದಾಗಿ ಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಶನಿವಾರ ತಮ್ಮನ್ನು ಭೇಟಿ ಮಾಡಿದ ಹಿರಿಯ ಪತ್ರಕರ್ತರ ನಿಯೋಗಕ್ಕೆ ಭರವಸೆ ನೀಡಿದರು.

ಕರ್ನಾಟಕದ ಅನೇಕ ಪತ್ರಕರ್ತರು ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಹೈಯರ್ ಪೆನ್ಷನ್ ಪಡೆಯುವ ಬಗ್ಗೆ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿಗೆ ಅರ್ಜಿ ಸಲ್ಲಿಸಿದ್ದಾರೆ. ಅವು ಅನೇಕ ತಿಂಗಳಿನಿಂದ ಇತ್ಯರ್ಥ ಕಾಣದೆ ಪತ್ರಕರ್ತರು ಅದರಲ್ಲೂ ನಿವೃತ್ತ ನೌಕರರು ತೀವ್ರ ಆರ್ಥಿಕ ಸಮಸ್ಯೆಗೆ ತುತ್ತಾಗಿರುವ ಸಂಗತಿಯನ್ನು ನಿಯೋಗ ಸಚಿವರ ಗಮನಕ್ಕೆ ತಂದಿತು. ಅನೇಕ ಪತ್ರಕರ್ತರು ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿಯಿಂದ ಬಂದ ಡಿಮ್ಯಾಂಡ್ ನೋಟ್ ಅನುಸಾರ ಹೆಚ್ಚುವರಿ ಮೊತ್ತವನ್ನು ಜನವರಿ ತಿಂಗಳಲ್ಲೇ ಪಾವತಿ ಮಾಡಿದ್ದಾರೆ, ಇದುವರೆವಿಗೂ ಇದು ಇತ್ಯರ್ಥವಾಗಿಲ್ಲ. ಆರು ತಿಂಗಳಿನಿಂದ ಕಟ್ಟಿದ ದುಡ್ಡಿಗೆ ಬಡ್ಡಿಯೂ ಇಲ್ಲ ಹೆಚ್ಚಿನ ಪೆನ್ಷನ್ನೂ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ ಎಂದು ನಿಯೋಗ ವಾಸ್ತವ ಚಿತ್ರಣವನ್ನು ಸಚಿವರ ಮುಂದೆ ತೆರೆದಿಟ್ಟಿತು. ಈ ಸಮಸ್ಯೆಗೆ ಕೂಡಲೇ ಸ್ಪಂದಿಸಿದ ಸಚಿವೆ ಶೋಭಾ ಕರಂದ್ಲಾಜೆ , ಈಗಾಗಲೇ ಡಿಮಾಂಡ್ ನೋಟ್ ವಿತರಿಸಿ ಹಣ ಕಟ್ಟಿಸಿಕೊಂಡ ಉದ್ಯೋಗಿಗಳ ಅರ್ಜಿಯನ್ನು ಕೂಡಲೇ ಇತ್ಯರ್ಥ ಪಡಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನು ಕೆಲವು ಸಂಸ್ಥೆಗಳ ಭವಿಷ್ಯ ನಿಧಿಯನ್ನು ಆಯಾ ಸಂಸ್ಥೆಗಳ ಟ್ರಸ್ಟ್ ಗಳೇ ನಡೆಸುತ್ತಿದ್ದು ತಾಂತ್ರಿಕ ಕಾರಣದ ಮೇಲೆ ಇಂಥ ಅರ್ಜಿಗಳು ತಿರಸ್ಕಾರ ಗೊಂಡಿರುವ ಸಂಗತಿಯನ್ನು ಸಚಿವರ ಗಮನಕ್ಕೆ ತರಲಾಯಿತು. ಈ ವಿಷಯ ಸರ್ಕಾರದ ಮಟ್ಟದಲ್ಲಿ ಈಗಾಗಲೇ ಚರ್ಚೆಯಲ್ಲಿದ್ದು ಅತಿ ಶೀಘ್ರದಲ್ಲೇ ಪರಿಹಾರ ಹುಡುಕುವ ಭರವಸೆ ನೀಡಿದರು.
ನಿಯೋಗದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರ, ಹಿರಿಯ ಪತ್ರಕರ್ತರಾದ , ಶ್ರೀವತ್ಸ ನಾಡಿಗ್, ನೆತ್ತನಕೆರೆ ಉದಯಶಂಕರ, ಎಂ ನಾಗರಾಜ, ,ಬಿ ಎನ್ ರಾಘವೇಂದ್ರ, ವಾದಿರಾಜ ದೇಸಾಯಿ, ಚಂದ್ರಶೇಖರ ಮತ್ತು ಹನುಮೇಶ್ ಕೆ ಯಾವಗಲ್ ಇದ್ದರು.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ