LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎಪಿಎಸ್.ನಿಂದ  ಕಿಡ್‌.ಝೀ ಪ್ರೀ-ಸ್ಕೂಲ್  ಪ್ರಾರಂಭ




ಬೆಂಗಳೂರು: ಶಿಕ್ಷಣ (Education) ಕ್ಷೇತ್ರದಲ್ಲಿ 91 ವರ್ಷಗಳಿಂದ ಸಾರ್ಥಕ ಸೇವೆ ಸಲ್ಲಿಸುತ್ತಿರುವ ಆಚಾರ್ಯ ಪಾಠಶಾಲಾ ಎಜುಕೇಶನಲ್ ಟ್ರಸ್ಟ್ (Acharya Pathashala Educational Trust) ಇದೀಗ ಕಿಡ್‌.ಝೀ ಪ್ರೀ-ಸ್ಕೂಲ್   (Kidzee-Pre-School) ಪ್ರಾರಂಭಿಸುತ್ತಿದೆ.


1.5 ರಿಂದ 3 ವರ್ಷದ ಮಕ್ಕಳಿಗಾಗಿ  ರೂಪಿಸಲಾಗಿರುವ ಈ ಪ್ರೀ-ಸ್ಕೂಲ್, ಮಕ್ಕಳಿಗೆ ಸಂತೋಷ ಮತ್ತು ಆಸಕ್ತಿದಾಯಕ ಶಿಕ್ಷಣ ನೀಡುವ ಉದ್ದೇಶ ಹೊಂದಿದೆ. ಆಟದ ಮೂಲಕ ಕಲಿಯುವ, ಒಟ್ಟಿಗೆ ಬೆಳೆಯುವ, ಸ್ನೇಹದ ವಾತಾವರಣದ ಜೊತೆಗೆ ಜೀವನ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವ, ಭಾರತೀಯ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಮಕ್ಕಳಲ್ಲಿ ಬೆಳೆಸುವ ಪಠ್ಯ ಕ್ರಮವನ್ನು ರೂಪಿಸಲಾಗಿದೆ.
ಕಟ್ಟಡದಲ್ಲಿ ಸುರಕ್ಷಿತ ಮತ್ತು ಮನೆಯಂತಿರುವ ವಾತಾವರಣದಲ್ಲಿ ಪ್ರೀ-ಸ್ಕೂಲ್ ಆರಂಭಿಸಲಾಗುತ್ತಿದೆ. ಮಕ್ಕಳಲ್ಲಿ ಕುತೂಹಲ ಮತ್ತು ಆತ್ಮವಿಶ್ವಾಸವನ್ನು ಉತ್ತೇಜಿಸುವ ಸ್ನೇಹಪೂರ್ಣ ವಾತಾವರಣವನ್ನು ಇಲ್ಲಿ ಸೃಷ್ಟಿಸಲಾಗಿದೆ ಎಂದು ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸಿಎ ಡಾ. ವಿಷ್ಣು ಭರತ್ ಅಲಂಪಲ್ಲಿ ತಿಳಿಸಿದ್ದಾರೆ.


ಎಪಿಎಸ್ ಪ್ರತಿಯೊಬ್ಬ ಮಗುವನ್ನೂ "ಚಿಕ್ಕ ಮಿನುಗುವ ನಕ್ಷತ್ರ"ವಾಗಿ ಭವಿಷ್ಯದ "ಎಪಿಎಸ್ ಸೂಪರ್ ಸ್ಟಾರ್"ಗಳಾಗಿ ರೂಪಿಸುತ್ತದೆ. ಎಪಿಎಸ್ ನಲ್ಲಿ ಶಿಕ್ಷಣವು ಕೇವಲ ಪಾಠಪುಸ್ತಕಗಳಿಗೆ ಸೀಮಿತವಾಗಿಲ್ಲ. "ಜೀವನ" ಎಂಬ ಮಹತ್ವದ ಪರೀಕ್ಷೆಗೆ ಸಿದ್ಧಗೊಳಿಸಲಾಗುತ್ತದೆ. ಎಪಿಎಸ್ ನಲ್ಲಿ ಪ್ರವೇಶ ಪಡೆದ ಮಕ್ಕಳು ತಮ್ಮ ಪೂರ್ಣ ಶಿಕ್ಷಣವನ್ನು ಇದೇ ಸಂಸ್ಥೆಯಲ್ಲೇ ಮುಂದುವರಿಸಬಹುದಾಗಿದೆ. ಕೆಜಿಯಿಂದ ಪಿಜಿವರೆಗೆ ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಮತ್ತು ಪಿಎಚ್ಡಿ ಶಿಕ್ಷಣ ಲಭ್ಯವಿದೆ.
ಆಟದ ಮೂಲಕ ಸಮಗ್ರ ಅಭಿವೃದ್ಧಿ, ಶೈಕ್ಷಣಿಕ ಮತ್ತು ಮೌಲ್ಯಾಧಾರಿತ ಶಿಕ್ಷಣ, ಒಂದೇ ಸಂಸ್ಥೆಯಲ್ಲಿ ನಿರಂತರ ಶಿಕ್ಷಣ. ಸೃಜನಶೀಲತೆ, ಸಂವಹನ ಮತ್ತು ಆತ್ಮವಿಶ್ವಾಸ ಅಭಿವೃದ್ಧಿ, 91 ವರ್ಷಗಳ ಶೈಕ್ಷಣಿಕ ಪರಂಪರೆ, ಎಪಿಎಸ್ ನಲ್ಲಿ ನಾವು ಕೇವಲ ಶಿಕ್ಷಣ ನೀಡುವುದಲ್ಲ - ನಾವು ಮಕ್ಕಳನ್ನು ಪ್ರೇರೇಪಿಸುತ್ತೇವೆ, ಅವರ ವ್ಯಕ್ತಿತ್ವವನ್ನು ರೂಪಿಸುತ್ತೇವೆ ಮತ್ತು ಭವಿಷ್ಯದ ನಾಯಕರನ್ನು ನಿರ್ಮಿಸುತ್ತೇವೆ  ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 9880701701 ಎಂದು ತಿಳಿಸಿದ್ದಾರೆ






Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ