LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿಕ್ಕಮಗಳೂರು ಕನ್ನಡ ಭವನದಲ್ಲಿ ರಾಜ್ಯ ಮಟ್ಟದ ಗಾಯನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

ಕರ್ನಾಟಕ ರಾಜ್ಯ ಬರಹಗಾರರ ಸಂಘ, ಹೂವಿನಹಡಗಲಿ ಮತ್ತು ಕರ್ನಾಟಕ ರಾಜ್ಯ ಬರಹಗಾರರ ಸಂಘದ ಚಿಕ್ಕಮಗಳೂರು ಜಿಲ್ಲಾ ಘಟಕದ ಸಹಯೋಗದಲ್ಲಿ ಚಿಕ್ಕಮಗಳೂರಿನ ಕನ್ನಡ ಭವನದಲ್ಲಿ ರಾಜ್ಯಮಟ್ಟದ ಗಾಯನ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ದಿನಾಂಕ 27.07.2025ರ ಭಾನುವಾರ ಬೆಳಿಗ್ಗೆ 10:00 ಗಂಟೆಗೆ ಏರ್ಪಡಿಸಲಾಗಿದೆ.

ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ರಾಜ್ಯ ಸಂಘವು ಪ್ರತಿ ಭಾನುವಾರ ಆನ್ಲೈನ್ ನಲ್ಲಿ ಚಿತ್ರಗೀತೆ ಒಳಗೊಂಡು ಜಾನಪದ ಗೀತೆ, ಭಾವಗೀತೆ ಸ್ಪರ್ಧೆಗಳನ್ನು ಏರ್ಪಡಿಸಿಕೊಂಡು ಬಂದು ಭಾಗವಹಿಸಿದ ಎಲ್ಲಾ ಗಾಯಕ ಗಾಯಕಿಯರಿಗೆ ಪ್ರಶಸ್ತಿ ಪತ್ರ ವಿತರಿಸಿ ಪ್ರೋತ್ಸಾಹಿಸಿಕೊಂಡು ಬಂದಿದೆ. ಹೀಗೆ ಭಾಗವಹಿಸಿದ ಗಾಯಕ ಗಾಯಕಿಯರಲ್ಲಿ 34 ಮಂದಿ ಗಾಯಕ ಗಾಯಕಿಯರನ್ನು ಆಯ್ಕೆ ಮಾಡಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಸಲಾಗುತ್ತಿದೆ. ಚಿಕ್ಕಮಗಳೂರು ಜಿಲ್ಲಾ ಬರಹಗಾರ ಸಂಘದ ಅಧ್ಯಕ್ಷರು ಡಾ. ವಿದ್ಯಾ ಕೆ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಬರಹಗಾರರ ಸಂಘದ ರಾಜ್ಯ ಅಧ್ಯಕ್ಷರು ಮಧುನಾಯಕ್ ಲಂಬಾಣಿ ಉದ್ಘಾಟಿಸುವರು

ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಸೂರಿ ಶ್ರೀನಿವಾಸ್ ಆಶಯ ನುಡಿ ನುಡಿಯುವರು. ಕರ್ನಾಟಕ ರಾಜ್ಯ ಬರಗಾಲ ಸಂಘದ ಗೌರವಾಧ್ಯಕ್ಷರು ಹಾಗೂ ಸಾಹಿತಿಗಳು ಗೊರೂರು ಅನಂತರಾಜು, ಹಾಸನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಹಾಗೂ ಕುರುವಂಜಿ ಕೆ.ಪಿ.ವೆಂಕಟೇಶ್ ಮಾಜಿ ರಾಜ್ಯಾಧ್ಯಕ್ಷರು ಸಫಾಯಿ ಕರ್ಮಚಾರಿ ನಿಗಮ ಮಂಡಳಿ, ಬಿ. ಎಲ್. ಪ್ರವೀಣ್ ಬೆಟ್ಟಗೇರಿ ಗುತ್ತಿಗೆದಾರರು, ಚಿಕ್ಕಮಗಳೂರು, ಜಯಣ್ಣ ಉಗ್ರಾಣ ಪಾಲಕರು, ಮೆಸ್ಕಾಂ, ಎಂ ಎಸ್ ನಾಗರಾಜ್ ಗೌರವಾಧ್ಯಕ್ಷರು, ಎಚ್ ಎಂ ಜಗದೀಶ್, ಉಪಾಧ್ಯಕ್ಷರು, ಹಸೖನಾರ್ ಬಿಳಿಗುಳ, ಜಿಲ್ಲಾ ಕೋಶಾಧ್ಯಕ್ಷರು, ರಾಕೇಶ್ ಸಿಂಗ್ ನಿರ್ದೇಶಕರು, ಡಾ. ಶೈಲಜಾಕುಮಾರ್, ಭರತನಾಟ್ಯ ಶಿಕ್ಷಕರು ಹಾಸನ, ವಿನೋದ್ ಗೌರವ ಸಲಹೆಗಾರರು, ಇಂಪಾ ನಾಗರಾಜ್ ಗೌರವ ಕಾಯ೯ದರ್ಶಿ, ಶ್ರೀ ನವೀನ್ ಬಿ.ಆರ್. ವಿಜಯ್ ಕುಮಾರ್ ಸಿ.ಆರ್. ಗೌ ಕಾರ್ಯದರ್ಶಿ, ರವಿ ಕುನ್ನಳ್ಳಿ ಗೌ ಸಲಹೆಗಾರರು ಭಾಗವಹಿಸುವರು. ಸಾಧಕರಿಗೆ ಸನ್ಮಾನವನ್ನು ಮಹಾಭಾರತ ಕಲಾವಿದರು ಮಧುಚಂದ್ರ, ಮಹಾಭಾರತ ಕಲಾವಿದರು ಹಾಗೂ ರಮೇಶ ಯಾದವ್ ಕಾಮಿಡಿ ಕಿಲಾಡಿಗಳು ಕಲಾವಿದರು ರಾಜ್ಯ ಮಟ್ಟದ ಕನ್ನಡ ಕೋಗಿಲೆ ಪ್ರಶಸ್ತಿ ವಿತರಿಸುವರು.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ