LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಾಮರಾಜನಗರ: ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ ಸಭಾಂಗಣದಲ್ಲಿ ವಿಚಾರ ಸಂಕಿರಣ

ಚಾಮರಾಜನಗರ: ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಡಾ. ಶಿವಕುಮಾರ ಸ್ವಾಮಿ ರವರ ಕೊಡುಗೆಗಳ ಕುರಿತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ ಸಭಾಂಗಣದಲ್ಲಿ ವಿಚಾರ ಸಂಕಿರಣ ಜರುಗಿತು.
ವಿಚಾರ ಸಂಕಿರಣವನ್ನು ಕೊಳ್ಳೇಗಾಲ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೊಂಗರಹಳ್ಳಿ ನಾಗರಾಜು ಉದ್ಘಾಟಿಸಿ ಮಾತನಾಡಿ ವಿಶೇಷ ಮಹತ್ವ ಪಡೆದ ಗುರುಗಳಾಗಿದ್ದಾರೆ. ಶಿಕ್ಷಣ ,ಆರೋಗ್ಯ ಮತ್ತು ದಾಸೋಹಕ್ಕೆ ಶಿವಕುಮಾರಸ್ವಾಮಿ ಅನ್ವರ್ಥರಾಗಿದ್ದಾರೆ. ಜಾತಿ ಮತ ಪಂಥ ಧರ್ಮ ಭೇದವಿಲ್ಲದೆ ಸರ್ವರಿಗೂ ಶಿಕ್ಷಣ ಹಾಗು ದಾಸೋಹವನ್ನು ನೀಡಿ ರಾಷ್ಟ್ರದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾದ ಜಗದೀಶ್ ರವರು ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಶಿವಕುಮಾರಸ್ವಾಮಿ ಅವರ ಕೊಡುಗೆಗಳ ಕುರಿತು ವಿಚಾರ ಸಂಕೀರ್ಣ ಹಮ್ಮಿಕೊಂಡಿರುವುದು ಕನ್ನಡ ಸಾಹಿತ್ಯ ಪರಿಷತ್ತಿಗೆ ಗೌರವ ತಂದಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾದ ಪದ್ಮಾಪುರುಷೋತ್ತಮ್ ,ಬೂದಿ ತಿಟ್ಟು ಲಿಂಗರಾಜು, ಬಿಕೆ ಆರಾಧ್ಯ ಲಕ್ಷ್ಮಿ ನರಸಿಂಹ, ಶಿವಕುಮಾರ ಸ್ವಾಮೀ ಅವರ ಕುರಿತು ಮಾತನಾಡಿ 111 ವರ್ಷಗಳ ಕಾಲ ಬದುಕಿ ಬಾಳಿ ವಿದ್ಯಾರ್ಥಿಗಳ ಬಾಳಿನಲ್ಲಿ ಬೆಳಕಾಗಿ ಕನ್ನಡ ನಾಡಿನ ಹಿರಿಮೆಯನ್ನು ಹೆಚ್ಚಿಸಿದ ಮಹಾದಾಸೋಹಿ. ಪ್ರೀತಿ ವಾತ್ಸಲೆಗಳ ಮಮಕಾರದ ವ್ಯಕ್ತಿಯಾಗಿದ್ದವರು ಸರಳತೆಯಿಂದ ಶ್ರೀ ಮಠವನ್ನು ಬೆಳೆಸಿದವರು. ಭಕ್ತರ ಕಾಣಿಕೆ ಮಠದ ಆಧಾರವೆಂದು ನಯವಾಗಿ ಸರ್ಕಾರದ ಅನುದಾನವನ್ನು ನಿರಾಕರಿಸಿದ ಮಹಾನ್ ವ್ಯಕ್ತಿ ಎಂದರು.

ಸಭೆಯ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಉಪನ್ಯಾಸಕರಾದ ಸುರೇಶ್ ಎನ್ ಋಗ್ವೇದಿ ವಹಿಸಿ ಮಾತನಾಡಿ ಶಿವಕುಮಾರ ಸ್ವಾಮಿಯವರು ಘನಮನ ಸಂಪನ್ನರು. ನಡೆದಾಡುವ ದೇವರೆಂದೇ ಜನಮಾನಸದಲ್ಲಿ ಯುಗ ಸಿರಿಯಾಗಿ ಬೆಳಗಿದವರು. ಸರ್ವರಲ್ಲೂ ಶಿವನನ್ನು ಕಂಡವರು. ಮಾತೃ ಹೃದಯಿಗಳಾದ ಶಿವಕುಮಾರ ಸ್ವಾಮಿಯವರು ಕೋಟ್ಯಾಂತರ ನೊಂದ ಹಾಗೂ ಹಸಿದ ವಿದ್ಯಾರ್ಥಿಗಳಿಗೆ ಅಕ್ಷರ ದಾಸೋಹ ಮತ್ತು ಅನ್ನದಾಸೋಹವನ್ನು ನೀಡಿ ಜಗತ್ತಿಗೆ ಬೆಳಕಾದವರು. ಅವರ ಸ್ಮರಣೆ ನಮ್ಮ ಪುಣ್ಯ. ಅವರು ನಮ್ಮ ಕಾಲದಲ್ಲಿ ನಮಗೆ ದರ್ಶನ ನೀಡಿಆಶೀರ್ವಾದ ನೀಡಿದ ಪುಣ್ಯವಂತ ದೈವಿಕರು ಎಂದು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾದ ರವಿಚಂದ್ರ ಪ್ರಸಾದ್,ಶಿವಲಿಂಗಮೂರ್ತಿ, ಸರಸ್ವತಿ, ಸುರೇಶಗೌಡ,ಪರಶಿವ ಶೆಟ್ಟಿ, ಮಹದೇವಸ್ವಾಮಿ, ರಂಗಸ್ವಾಮಿ, ಶೇಖರ್, ಮಹೇಶ, ಶಿವಶೆಟ್ಟಿ ಇದ್ದರು.
ಕನ್ನಡ ಭಕ್ತಿಗೀತೆಗಳ ಗೀತ ಗಾಯನವನ್ನು ವಚನ, ಗಮಕವನ್ನು ಹಾಡುವ ಮೂಲಕ ಶಿವಕುಮಾರ ಸ್ವಾಮಿಯವರನ್ನು ಸ್ಮರಿಸಿಕೊಳ್ಳಲಾಯಿತು
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ