LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಥಟ್ ಅಂತ ಹೇಳಿ 5000 ಸಂಚಿಕೆ ಕಾರ್ಯಕ್ರಮಕ್ಕೆ ಕಿಕ್ಕಿರಿದ ಸಭಿಕರು

ಥಟ್ ಅಂತ ಹೇಳಿ (That antha Heli) 5000 ಸಂಚಿಕೆ ಕಾರ್ಯಕ್ರಮಕ್ಕೆ ಕಿಕ್ಕಿರಿದು ನೆರೆದ ಸಭಿಕರು (Crowded audience)ಜ್ಞಾನ, ಜ್ಞಾಪಕಶಕ್ತಿಯ ಸಂಗಮ ಥಟ್ ಅಂತ ಹೇಳಿ ಕಾರ್ಯಕ್ರಮ: ಸಚಿವ ಈಶ್ವರ ಖಂಡ್ರೆ (Eshwar Khandre)
ಜ್ಞಾನ ಮತ್ತು ಜ್ಞಾಪಕಶಕ್ತಿಯ ಸಮ್ಮಿಲನವೇ ರಸಪ್ರಶ್ನೆ ಸ್ಪರ್ಧೆ. ಇದು ಬುದ್ಧಿ, ಭಾವಕ್ಕೆ ಕಸರತ್ತು ನೀಡುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು.

ನಗರದ ಜಿಕೆವಿಕೆಯ ಸಭಾಂಗಣದಲ್ಲಿ ನಿನ್ನೆ ಅಕ್ಟೋಬರ್ 11 ರಂದು ಬೆಂಗಳೂರು ದೂರದರ್ಶನ ಚಂದನವಾಹಿಯಿಂದ ಪ್ರಸಾರವಾಗುವ ಥಟ್ ಅಂತ ಹೇಳಿ ರಸಪ್ರಶ್ನೆ ಕಾರ್ಯಕ್ರಮ 5000 ಸಂಚಿಕೆಯೊಂದಿಗೆ ಗಿನ್ನಿಸ್ ಬುಕ್ ಆಫ್ ವಲ್ರ್ಡ್ ರೆಕಾರ್ಡ್ ಸೇರುತ್ತಿರುವ ಸಂದರ್ಭಕ್ಕೆ ಸಚಿವರು ಸಾಕ್ಷಿಯಾದರು.

ಕಿಕ್ಕಿರಿದು ತುಂಬಿದ್ದ ಸಭಾಂಗಣದಲ್ಲಿ ಸಭಿಕರ ಅಮಿತೋತ್ಸಾಹದ ನಡುವೆ ಉತ್ಸಾಹಭರಿತರಾಗಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಮಾಹಿತಿ ಮತ್ತು ಮನೋರಂಜನೆ ನೀಡುವ ಈ ಕಾರ್ಯಕ್ರಮ ಕಳೆದ 23 ವರ್ಷಗಳಿಂದ ವೀಕ್ಷಕರ ಜ್ಞಾನದಾಹ ತಣಿಸುತ್ತಿದೆ ಎಂದರು.

ಬೆಂಗಳೂರು ದೂರದರ್ಶನ ಆರಂಭವಾದ 1980ರ ದಶಕದಿಂದಲೂ ತನ್ನ ಗಾಂಭೀರ್ಯತೆ, ವೃತ್ತಿ ನಿμÉ್ಠ ಉಳಿಸಿಕೊಂಡಿದೆ. ವಿಚಾರಪೂರ್ಣ ಮಾಹಿತಿ, ಆರೋಗ್ಯಕರ ಮನರಂಜನೆಯನ್ನು ಉಚಿತವಾಗಿ ಸಮಸ್ತ ಜನತೆಗೆ ನೀಡುತ್ತಿದೆ. ಹಲವು ಪ್ರತಿಭೆಗಳ ಪ್ರಕಾಶಕ್ಕೆ ಅನುವು ಮಾಡಿಕೊಟ್ಟಿದೆ ಎಂದರು.

ಥಟ್ ಅಂತ ಹೇಳಿ ಕಾರ್ಯಕ್ರಮದಲ್ಲಿ 15 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದಾರೆ. 75 ಸಾವಿರಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ತಿಳಿದು ಅಚ್ಚರಿ ಎನಿಸಿತು. ಮಾಧ್ಯಮ ತಜ್ಞರಾದ ಡಾ. ನಾ. ಸೋಮೇಶ್ವರ್ ಅಭಿನಂದನಾರ್ಹರು ಎಂದರು.

ಥಟ್ ಅಂತ ಹೇಳಿ ಕಾರ್ಯಕ್ರಮವನ್ನು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿಯೂ ನಡೆಸಲಾಗಿತ್ತು. ಪ್ರಕೃತಿ, ಪರಿಸರ, ವನ್ಯಜೀವಿಗಳ ಬಗ್ಗೆಯೂ ಜನರಲ್ಲಿ ಜಾಗೃತಿ ಮೂಡಿಸಿದ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದಲೂ ಮಾಹಿತಿ ಆಹ್ವಾನಿಸಿ ಅದನ್ನು ತಿಳಿಯಪಡಿಸಲಾಗುತ್ತಿದೆ. ಒಟ್ಟಾರೆ ಥಟ್ ಅಂತ ಹೇಳಿ ಕಾರ್ಯಕ್ರಮ ಒಂದು ಜ್ಞಾನಭಂಡಾರ ಎಂದು ಈಶ್ವರ ಖಂಡ್ರೆ ಬಣ್ಣಿಸಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಭಿಕರಲ್ಲಿ ಆಸಕ್ತರನ್ನು ಚೀಟಿ ಎತ್ತುವ ಮೂಲಕ ಆಯ್ಕೆ ಮಾಡಿ ಅಪಾರ ಜನ ಸಮೂಹದ ನಡುವೆ ಗಿನ್ನೆಸ್ ದಾಖಲೆಯ 5 ಸಾವಿರದ ಸ್ಮರಣೀಯ ಸಂಚಿಕೆಯನ್ನು ಚಿತ್ರೀಕರಿಸಲಾಯಿತು. ಸೋಮವಾರ [ಅಕ್ಕಟೋಬರ್ 13 ರಂದು] ಈ ಮೈಲಿಗಲ್ಲಿನ ಕಾರ್ಯಕ್ರಮ ಪ್ರಸಾರವಾಗಲಿದೆ.

ಕಾರ್ಯಕ್ರಮದಲ್ಲಿ ಕನ್ನಡದ ಖ್ಯಾತ ವಿಜ್ಞಾನ, ನಾಡೋಜ ಪ್ರೊ. ಹಂಪಾ ನಾಗರಾಜಯ್ಯ, ಶಿಕ್ಷಣ ತಜ್ಞ ನಾಡೋಜ ವೂಡೇ ಪಿ ಕೃಷ್ಣ, ಕಲ್ಬುರ್ಗಿ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಶಶಿಕಾಂತ್ ಉಡಿಕೇರಿ, ವಿದುಷಿ ರೇವತಿ ಕಾಮತ್, ದೂರದರ್ಶನ ಕೇಂದ್ರ ದಕ್ಷಿಣ ವಲಯದ ಉಪ ಮಹಾನಿರ್ದೇಶಕರಾದ ಭಾಗ್ಯವಾನ್, ಕಾರ್ಯಕ್ರಮದ ಉಸ್ತುವಾರಿ ಮತ್ತು ನಿರ್ವಹಣೆ ಜವಾಬ್ದಾರಿ ನಿಭಾಯಿಸುತ್ತಿರುವ ಎಚ್.ಎನ್. ಆರತಿ, ಥಟ್ ಅಂತ ಹೇಳಿ ಕಾರ್ಯಕ್ರಮದ ನಿರ್ಮಾಪಕರಾದ ಚಂದ್ರಕಲಾ, ಕಾರ್ಯಕ್ರಮ ನಿರೂಪಕರಾದ ಡಾ. ನಾ. ಸೋಮೇಶ್ವರ್ ಮೊದಲಾದವರು ಪಾಲ್ಗೊಂಡಿದ್ದರು.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ