LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ 33ನೇ ಯುವ ಸಂಘಟನೆ ಆಯೋಜನೆ

ಶ್ರೀ ಚಾಮರಾಜೇಂದ್ರ ಮೃಗಾಲಯವು 12 ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ 33ನೇ ಯುವ ಸಂಘಟನೆಯನ್ನು ಆಯೋಜಿಸಲು ಉದ್ದೇಶಿಸಿದ್ದು, ಕಾರ್ಯಕ್ರಮವನ್ನು ಜುಲೈ 2025 ರಿಂದ ಜನವರಿ 2026 ರವರೆಗೆ 25 ಭಾನುವಾರಗಳಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1:00 ಗ0ಟೆವರೆಗೆ ನಡೆಸಲಾಗುವುದು.

ಮೊದಲು ಬಂದವರಿಗೆ ಮೊದಲ ಆದ್ಯತೆ ಅಧಾರದ ಮೇಲೆ 60 ಮಂದಿ ವಿದ್ಯಾರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ವನ್ಯಪ್ರಾಣಿಗಳ ವೈವಿಧ್ಯತೆ, ಸಂರಕ್ಷಣೆ ಹಾಗು ಮೃಗಾಲಯ ಪರಿಸರದಲ್ಲಿ ಅವುಗಳ ನಿರ್ವಹಣೆ, ಪ್ರಾಣಿ ವರ್ತನೆ ಅಧ್ಯಯನದ ಬಗ್ಗೆ ಕಾಲಕಾಲಕ್ಕೆ ತರಗತಿಗಳ ಮೂಲಕ ತಿಳಿಯಪಡಿಸಲಾಗುವುದು.ಆಸಕ್ತಿಯುಳ್ಳವರು ಜೂನ್ 25 ರಿಂದ ಜೂನ್ 28 ರವರೆಗೆ ಮೃಗಾಲಯದ ಕಛೇರಿಯಿಂದ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಅರ್ಜಿಯನ್ನು ಕಚೇರಿಯ ವೇಳೆಯಲ್ಲಿ ಸಲ್ಲಿಸುವುದು. ಭರ್ತಿ ಮಾಡಿದ ಅರ್ಜಿಯೊಂದಿಗೆ ಪಾಸ್‍ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ, ವಯಸ್ಸಿನ ಪುರಾವೆಗಾಗಿ ಆಧಾರ್ ಕಾರ್ಡ್ ಅಥವಾ ಜನನ ಪ್ರಮಾಣ ಪತ್ರದ ನಕಲು ದಾಖಲಾತಿಗಳನ್ನು ಸಲ್ಲಿಸಬೇಕು.

ಶಿಬಿರದ ಶುಲ್ಕ ರೂ. 2,500/- ಪಾವತಿಸಬೇಕು. ಭರ್ತಿ ಮಾಡಿದ ಅರ್ಜಿಯನ್ನು 2025 ನೇ ಜೂನ್ 28ರ ಸಂಜೆ  4:00 ಗಂಟೆಯೊಳಗಾಗಿ ಸಲ್ಲಿಸುವುದು. ಶಿಬಿರಕ್ಕೆ ಹಾಜರಾಗಲು ಆಯ್ಕೆಯಾದ ಸದಸ್ಯರಿಗೆ ಇ-ಮೇಲ್ ಮೂಲಕ ಸೂಚನೆ ಮತ್ತು ಹೆಚ್ಚಿನ ವಿವರಗಳನ್ನು ಕಳುಹಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಮೃಗಾಲಯದ ವೆಬ್‍ಸೈಟ್ www.mysuruzoo.info ಅಥವಾ ಇ-ಮೇಲ್ [email protected] ಗೆ ಸಂಪರ್ಕಿಸಬಹುದು ಎಂದು ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ