LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

*ಋತುಚಕ್ರ ಒಂದು ದಿನ ರಜಾ ಘೋಷಣೆ ರಾಜ್ಯ ಸಚಿವ ಸಂಪುಟ ನಿರ್ಧಾರಕ್ಕೆ ಅಖಿಲ ಕರ್ನಾಟಕ ಸರ್ಕಾರಿ ಮಹಿಳಾ ನೌಕರರ ಸಂಘದಿಂದ ಅಭಿನಂದನೆ

 

ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಂಪುಟ ಸಚಿವರು ಸರ್ಕಾರಿ ಮಹಿಳಾ ನೌಕರರು, (Garments) ಗಾರ್ಮೆಂಟ್ಸ್ ಮಹಿಳಾ ನೌಕರರು, ಐ.ಟಿ.ಯಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ನೌಕರರಿಗೆ (Lady Employees) ಋತುಚಕ್ರ ಸಂದರ್ಭದಲ್ಲಿ ಒಂದು ರಜಾ(Leave)  ನೀಡಬೇಕು ಎಂದು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಯಿತು.

ಈ ಶುಭ ಸಂದರ್ಭದಲ್ಲಿ ಅಖಿಲ ಕರ್ನಾಟಕ ಸರ್ಕಾರಿ ಮಹಿಳಾ ನೌಕರರ ಸಂಘದ ಅಧ್ಯಕ್ಷೆ ಶ್ರೀಮತಿ ರೋಶನಿಗೌಡರವರು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದರು.

ಮಹಿಳೆಯರು ಅಬಲೆಯರು ಅಲ್ಲ, ಇಂದು ಸಬಲೆಯರಾಗಿ ಹೊರಹೊಮ್ಮಿದ್ದಾರೆ. ಮಹಿಳೆಯು ಕುಟುಂಬದ ಜವಾಬ್ದಾರಿಯ ಜೊತೆಯಲ್ಲಿ ಸಮಾಜದ ಅಭಿವೃದ್ದಿಗೆ ಶ್ರಮಿಸುವಳು. ತಂದೆ, ತಾಯಿ ಅತ್ತೆ, ಮಾವ, ಗಂಡ, ಮಕ್ಕಳು ಹೀಗೆ ಕುಟುಂಬದವರ ಎಲ್ಲರ ಯೋಗಕ್ಷೇಮ ನೋಡಿಕೊಂಡು ನಂತರ ಸಮಯದ ಗಮನಕಡೆ ಕೋಡದೇ ತನ್ನ ಕೆಲಸದಲ್ಲಿ ನಿರತಳಾಗುತ್ತಾಳೆ.

ಎಂದು ಸಹ ದಣಿವರಿಯದ ಕೆಲಸ ಮಹಿಳೆಯರು ಪ್ರತಿ ತಿಂಗಳ ಋತುಚಕ್ರ ಸಂದರ್ಭದಲ್ಲಿ ಮಾನಸಿಕ, ದೃಹಿಕವಾಗಿ ಯಾತೆನೆ ಅನುಭವಿಸುತ್ತಾಳೆ ಅದರೇ ಇದೆಲ್ಲವನ್ನು ಲೆಕ್ಕಿಸದೇ ತನಗೆ ವಹಿಸಿದ ಕೆಲಸವನ್ನು ಜವಾಬ್ದಾರಿಯುತವಾಗಿ ನಿಭಾಯಿಸುತ್ತಾಳೆ.

ರಾಜ್ಯ ಸಚಿವ ಸಂಪುಟದಲ್ಲಿ ಋತುಚಕ್ರದ ಸಂದರ್ಭದಲ್ಲಿ ವೇತನಸಹಿತ ಒಂದು ದಿನದ ರಜಾ ನೀಡಬೇಕು ಎಂದು ಸರ್ಕಾರ ಸಚಿವ ತೀರ್ಮಾನ ಮಾಡಿರುವುದು ರಾಜ್ಯದ ಮಹಿಳೆಯರಿಗೆ ಸಂತಸದ ತೀರ್ಮಾನವಾಗಿದೆ.

ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರಿಗೂ ಮತ್ತು ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಧನ್ಯವಾದಗಳು ಎಂದು ಸಂಘದ ಅಧ್ಯಕ್ಷೆ ಶ್ರೀಮತಿ ರೋಶನಿಗೌಡರವರು ತಿಳಿಸಿದರು.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ