LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್ ಮೂಲಕ ಇ-ಪಾಸ್ ಪಡೆಯಲು ಅವಕಾಶ

ಬೆಂಗಳೂರು, ಆಗಸ್ಟ್ 13 (ಕರ್ನಾಟಕ ವಾರ್ತೆ): ಬೆಂಗಳೂರು ನಗರದಲ್ಲಿ ಆಗಸ್ಟ್ 15 ರಂದು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ  ಪರೇಡ್ ಮೈದಾನದಲ್ಲಿ ನಡೆಯಲಿರುವ ರಾಜ್ಯಮಟ್ಟದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಪ್ರಥಮ ಬಾರಿಗೆ ಇ-ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ವೀಕ್ಷಿಸಲು ಆಸಕ್ತಿ ಹೊಂದಿರುವ ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್ www.sevasindhu.karnataka.gov.in  ನಿಂದ ಇ-ಪಾಸ್ ಅನ್ನು ಪಡೆಯಲು ಸೇವಾ ಸಿಂಧು ವೆಬ್‍ಸೈಟ್‍ನಲ್ಲಿ ಆಧಾರ್ ಕಾರ್ಡ್ ವಿವರಗಳನ್ನು ನಮೂದಿಸಿ ನೋಂದಾಯಿಸಿಕೊಳ್ಳತಕ್ಕದ್ದು ಮತ್ತು ವೆಬ್‍ಸೈಟ್ ನಲ್ಲಿ ಲಾಗಿನ್ ಮಾಡಿ ತಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿದ ನಂತರ ಬರುವ ಒಟಿಪಿ ಅನ್ನು ಅಳವಡಿಸಿ ಇ-ಪಾಸ್ ಅನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ.
ವಿಶೇಷ ಸೂಚನೆ:
ಇ-ಪಾಸ್ ಕೇವಲ ಆಗಸ್ಟ್ 15 ರಂದು ಮಾತ್ರ ಮಾನ್ಯವಾಗಿರುತ್ತದೆ. ಇ-ಪಾಸ್ ಹೊಂದಿರುವವರು ಬೆಳಿಗ್ಗೆ 08:15 ಗಂಟೆಗಿಂತ ಮೊದಲು ಗೇಟ್ ನಂ.4ರ ಬಳಿ ಆವರಣದ ಒಳಗೆ ಪ್ರವೇಶಿಸಬೇಕು. ಈ ಸಮಯದ ನಂತರ ಪ್ರವೇಶ ಅನುಮತಿಸಲಾಗುವುದಿಲ್ಲ ಹಾಗೂ ಇ-ಪಾಸ್ ಅಮಾನ್ಯವೆಂದು ಪರಿಗಣಿಸಲಾಗುತ್ತದೆ. ಪ್ರತಿ ಇ-ಪಾಸ್ ಕೇವಲ ಒಬ್ಬರಿಗೆ ಮಾತ್ರ ಪ್ರವೇಶಿಸಲು ಅನುಮತಿಸಿದೆ. ಕಾರ್ಯಕ್ರಮದ ಸಮಯದಲ್ಲಿ ಇ-ಪಾಸ್‍ನ ಮುದ್ರಿತ ಪ್ರತಿ ಅಥವಾ ಡಿಜಿಟಲ್ (ಮೊಬೈಲ್) ಪ್ರತಿಯನ್ನು ಕಡ್ಡಾಯವಾಗಿ ಹೊಂದಿರಬೇಕು.

6 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಇ-ಪಾಸ್ ಅವಶ್ಯವಿರುವುದಿಲ್ಲ. ಇ-ಪಾಸ್ ಅನ್ನು ವರ್ಗಾಯಿಸುವಂತಿಲ್ಲ. ಇ-ಪಾಸ್‍ಗಳು ಒಟ್ಟು 3000 ಸಂಖ್ಯೆಗೆ ಸೀಮಿತವಾಗಿರುವುದರಿಂದ ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಮೂಲ ಗುರುತಿನ ಚೀಟಿ ಕಡ್ಡಾಯವಾಗಿ ಹೊಂದಿರಬೇಕು.
ಇ-ಪಾಸ್ ಹೊಂದಿರುವವರಿಗೆ ಪಾರ್ಕಿಂಗ್ ಸೌಲಭ್ಯ ಒದಗಿಸಲಾಗುವುದಿಲ್ಲ. ಪಾಕಿರ್ಂಗ್ ವ್ಯವಸ್ಥೆಗೆ ಪಾಸ್‍ಧಾರರೇ ಜವಾಬ್ದಾರರಾಗಿರುತ್ತಾರೆ ಎಂದು ಸಕಾರದ ಮುಖ್ಯ ಕಾರ್ಯದಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
VKNEWS HEADLINES TODAY ;

https://www.youtube.com/watch?v=ZcdBAHsOyVY
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ