LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜನರ ಮನಸ್ಸು ಉಲ್ಲಾಸಗೊಳಿಸುವಲ್ಲಿ ನಾಟಕಗಳ ಪಾತ್ರ ಪ್ರಮುಖ ಗೊರೂರು ಅನಂತರಾಜು

ಹಾಸನ : ಪೌರಾಣಿಕ ನಾಟಕ ಪ್ರದರ್ಶನದ ದುಬಾರಿ ವೆಚ್ಚವನ್ನು ಭರಿಸಲು ಕಲಾತಂಡಗಳೇ ಒಟ್ಟಾಗಿ ಒಂದು ತಂಡದ ನೇತೃತ್ವದಲ್ಲಿ ನಾಟಕೋತ್ಸವ ಏರ್ಪಡಿಸಿ ಕಲಾಪ್ರೇಮಿಗಳಿಗೆ ಮನರಂಜನೆ ಒದಗಿಸುತ್ತಿವೆ. ಮನೆಯಲ್ಲೇ ಕುಳಿತು ಜಡ್ಡು ಹಿಡಿದ ಜನರ ಮನಸ್ಸು ಉಲ್ಲಾಸಗೊಳಿಸುವ ದಿಶೆಯಲ್ಲಿ ನಾಟಕಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ನಾಟಕಕಾರ ಗೊರೂರು ಅನಂತರಾಜು ಅಭಿಪ್ರಾಯಪಟ್ಟರು. ಹಾಸನದ ಶ್ರೀ ಅನ್ನಪೂರ್ಣೇಶ್ವರಿ ಕಲಾಸಂಘ ಹಾಸನದ ಕಲಾಭವನದಲ್ಲಿ ಏರ್ಪಡಿಸಿರುವ ನಾಟಕೋತ್ಸವದಲ್ಲಿ ಭಾನುವಾರ ಶ್ರೀ ಅನ್ನಪೂರ್ಣೇಶ್ವರಿ ಕಲಾಸಂಘ ಪ್ರದರ್ಶಿಸಿದ ಹೇಮಾವತಿ ಸ್ವಯಂವರ ನಾಟಕದಲ್ಲಿ ಅವರು ಮಾತನಾಡಿ ಕುರುಕ್ಷೇತ್ರ, ರಾಮಾಯಣ ನಾಟಕಗಳೇ ಹೆಚ್ಚೆಚ್ಚು ಪ್ರದರ್ಶನಗೊಂಡು ಜನರ ಮನಸ್ಸಿನಲ್ಲಿ ಹಾಸುಹೊಕ್ಕಾಗಿವೆ. ಕಲಾತಂಡಗಳು ಹೊಸ ಹೊಸ ನಾಟಕ ಕಲಿತು ಪ್ರದರ್ಶಿಸಬೇಕು. ಕಲಾವಿದರು ಹಲವು ಬಗೆಯ ಪಾತ್ರಗಳಲ್ಲಿ ಅಭಿನಯ ತೋರಬೇಕು. ಕಲಾವಿದ ಡಿ.ವಿ.ನಾಗಮೊಹನ್ ಹೊಸ ಪ್ರಯೋಗವಾಗಿ ಹೇಮಾವತಿ ಸ್ವಯಂವರ ನಾಟಕ ಏರ್ಪಡಿಸಿದ್ದಾರೆ.



ಇದೇ ರೀತಿ ಇನ್ನೂ ಹಲವು ಪೌರಾಣಿಕ ನಾಟಕಗಳ ಪ್ರದರ್ಶನ ಕಲಾಭವನದಲ್ಲಿ ನಡೆಯಲೆಂದು ಆಶಿಸಿದರು. ಹಾಸನ ಜಿಲ್ಲಾ ಕಲಾವಿದರ ಹಿತರಕ್ಷಣಾ ಸಮಿತಿ ಅಧ್ಯಕ್ಷರು ಬಿದರೆ ರವಿ, ಖಜಾಂಚಿ ರಮೇಶ್ ಗೌಡಪ್ಪ, ಕಲಾವಿದರಾದ ಹೆಚ್.ಎಂ.ಪ್ರಭಾಕರ್, ಯರೇಹಳ್ಳಿ ಮಂಜೇಗೌಡ್ರು, ಗ್ಯಾರಂಟಿ ರಾಮಣ್ಣ, ಕರ‍್ಲೆ ಗೋವಿಂದೇಗೌಡ್ರು, ತಿಮ್ಮಣ್ಣ, ಗಣೇಶ್, ಭಾನುಶೇಖರ್, ಶಶಿ ಸಾಲಗಾಮೆ, ಶ್ರೀಕಂಠಪ್ಪ ಸಿ.ಎಂ. ಮಾಯಸಂದ್ರ ಟಿ.ನಾಗರಾಜ್, ವಕೀಲರು ತಿಮ್ಮೇಗೌಡ್ರು ಮೊದಲಾದವರು ಇದ್ದರು. ನಾಟಕ ನಿರ್ದೇಶಕÀರು ಡಿ.ಸಿ.ಪುಟ್ಟರಾಜು ಕುಟುಂಬವನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು.

ಅನ್ನಪೂರ್ಣೇಶ್ವರಿ ಕಲಾಸಂಘದ ಅಧ್ಯಕ್ಷರು ನಾಟಕೋತ್ಸವ ಆಯೋಜಕರು ಕಲಾವಿದ ಡಿ.ವಿ.ನಾಗಮೊಹನ್ ಕಾರ್ಯಕ್ರಮ ನಿರೂಪಿಸಿ ಕಲಾವಿದ ವೈಭವ್ ವೆಂಕಟೇಶ್ ಸ್ವಾಗತಿಸಿದರು. ಹಾಸನದಲ್ಲಿ ನೂತನವಾಗಿ ಪ್ರಯೋಗಗೊಂಡ ಶಿವಭಕ್ತ ಚಂಡಾಸುರನ ವಧೆ ಪ್ರೇಕ್ಷಕರ ಮನ ಸೆಳೆಯಿತು.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ