LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರೀಯ ಸದನ ಕನ್ನಡ ಸಂಘ ಕಚೇರಿ ಉಳಿಸಿಕೊಡುವ ಸ್ಪಷ್ಟ ಭರವಸೆ - ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರಿನ ಕೋರಮಂಗಲದಲ್ಲಿರುವ ಕೇಂದ್ರೀಯ ಸದನ ಕನ್ನಡ ಸಂಘವು, ಸದನದ ೮ನೇ ಮಹಡಿಯ ಕಚೇರಿಯಲ್ಲಿ ಎರಡು ದಶಕಗಳಿಂದ ರಚನಾತ್ಮಕ ಕನ್ನಡ ಕೆಲಸ ಮಾಡುತ್ತಿದೆ. ಈಗ ಬಂದಿರುವ ಕನ್ನಡೇತರ ಅಧಿಕಾರಿಗಳು ಕನ್ನಡ ಸಂಘವು ಕಚೇರಿಯನ್ನು ಅನಧಿಕೃತವಾಗಿ ಆಕ್ರಮಿಸಿಕೊಂಡಿದೆ ಎಂದು ಆದೇಶ ಪತ್ರ ನೀಡಿ ಸಂಘದ ಕಚೇರಿಯನ್ನು ತೆರವುಗೊಳಿಸಿ, ವಸ್ತುಗಳನ್ನು ಪಡಸಾಲೆಗೆ ಹಾಕಿದ್ದಾರೆ. ಸಂಘದ ಕಚೇರಿಯನ್ನು ಉಳಿಸಿಕೊಂಡುವAತೆ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿಯವರಿಗೆ ಸಂಘದ ನಿಯೋಗವು ಮನವಿ ಮತ್ತು ದಾಖಲೆಗಳನ್ನು ನೀಡಿತು. ಮನವಿಯನ್ನು ಪರಿಶೀಲಿಸಿದ ಸಚಿವರು ಕೇಂದ್ರ ನಗರಾಭಿವೃದ್ಧಿ ಸಚಿವರೊಂದಿಗೆ ಮಾತನಾಡಿ ಸಂಘದ ಕಚೇರಿಯನ್ನು ಉಳಿಸಿಕೊಡುವುದಾಗಿ ಖಚಿತ ಭರವಸೆ ನೀಡಿದರು.


ಇಂದು (೨೮-೦೬-೨೦೨೫) ಬೆಳಗ್ಗೆ ಸಚಿವರ ಜೆಪಿ ನಗರದ ಮನೆಯಲ್ಲಿ ಖ್ಯಾತ ಚಲನಚಿತ್ರ ನಿರ್ದೇಶಕ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಡಾ. ಟಿ.ಎಸ್. ನಾಗಾಭರಣ, ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ಡಾ. ಮನು ಬಳಿಗಾರ್, ಕನ್ನಡ ಚಿಂತಕ ರಾ.ನಂ. ಚಂದ್ರಶೇಖರ, ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಕಾರ್ಯದರ್ಶಿ ವ.ಚ. ಚನ್ನೇಗೌಡ, ಕೇಂದ್ರೀಯ ಸದನ ಕನ್ನಡ ಸಂಘದ ಅಧ್ಯಕ್ಷ ಮ. ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಬಿ. ಆನಂದಮೂರ್ತಿ ಮತ್ತು ಸಮಿತಿಯ ಸದಸ್ಯ ಕೆಂಪಯ್ಯ  ಅವರುಗಳಿದ್ದ ನಿಯೋಗವು ಸಚಿವರನ್ನು ಭೇಟಿ ಮಾಡಿದಾಗ ಸಚಿವರ ಕಾರ್ಯದರ್ಶಿ ತೇಜಸ್ವಿ ನಾಯಕ್  ಐ.ಎ.ಎಸ್. ಮುಂತಾದ ಅಧಿಕಾರಿಗಳು ಇದ್ದರು.

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ