LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಾಮಾಣಿಕ ಕರ್ತವ್ಯದಿಂದ ಜನಮನ ಗೆದ್ದ ವಿ.ಪೂರ್ಣಿಮಾ: ತಹಶೀಲ್ದಾರ್ ಆಗಿ ಮಂಚೇನಹಳ್ಳಿ ತಾಲೂಕಿಗೆ ವರ್ಗಾವಣೆ

ಶಿಡ್ಲಘಟ್ಟ : ತಾಲೂಕಿಗೆ ತಹಶೀಲ್ದಾರ್ ಗ್ರೇಡ್ 2 ಆಗಿ ವರ್ಷಗಳಿಂದ ದಕ್ಷತೆಯಿಂದ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ ವಿ.ಪೂರ್ಣಿಮಾ ರವರನ್ನು ಗ್ರೇಡ್ 1 ತಹಶೀಲ್ದಾರ್ ಆಗಿ ಮಂಚೇನಹಳ್ಳಿ ತಾಲೂಕಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಶಿಡ್ಲಘಟ್ಟ ತಾಲೂಕು ವ್ಯಾಪ್ತಿಯ ನಾಲ್ಕೂ ಹೋಬಳಿಗಳಲ್ಲೂ ಎಲೆ ಮರಿ ಕಾಯಿಯಂತೆ ಖುದ್ದು ತಾವೇ ಪಿಂಚಣಿ ಆದಾಲತ್ ಮೂಲಕ ಹಿರಿಯ ನಾಗರೀಕರಿಗೆ ಪಿಂಚಣಿ ಸೇರಿದಂತೆ, ಸುಮಾರು ವರ್ಷಗಳಿಂದ ಸ್ಥಗಿತಗೊಂಡಿದ್ದ ವೃದ್ಧಾಪ್ಯದ ವೇತನ, ವಿವಿಧ ಮಾಶಾಸನ ಹಾಗೂ ಸರ್ಕಾರದ ಯೋಜನೆಗಳ ಕುರಿತು ಹಳ್ಳಿಗಳಲ್ಲಿ ಅರಿವು ಮೂಡಿಸುವ ಮೂಲಕ ಗ್ರಾಮೀಣ ಭಾಗದ ಹಿರಿಯ ನಾಗರೀಕರ ವಿಶ್ವಾಸವನ್ನು ಗಳಿಸಿದ್ದ ಅಧಿಕಾರಿಯಾಗಿದ್ದರು ಜೊತೆಗೆ ಸರ್ಕಾರಿ ಕೆಲಸ ದೇವರ ಕೆಲಸ ಎಂದೇ ಪ್ರಾಮಾಣಿಕ ತಾಲೂಕು ಅಭಿವೃದ್ಧಿಯಲ್ಲಿ ಮಗ್ನರಾಗಿರುವ ಪೂರ್ಣಿಮಾ ಅವರು ಅದಾಲತ್ ಕಾರ್ಯಕ್ರಮಗಳಲ್ಲಿ ಅನೇಕ ಮಹಿಳೆಯರಿಗೆ ಹಾಗೂ ವೃದ್ಧರಿಗೆ ಪಿಂಚಣಿ ಸೌಲಭ್ಯಗಳನ್ನು ಒದಗಿಸುವುದಲ್ಲದೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇನ್ನಿತರೆ ಪ್ರಮಾಣ ಪತ್ರಗಳನ್ನು ನೀಡುವಲ್ಲಿ ಪ್ರಾಮಾಣಿಕವಾಗಿ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ.

ಸರ್ಕಾರದ ಭೂ ಸುರಕ್ಷಾ ಯೋಜನೆಯಲ್ಲಿ ಎ ಮತ್ತು ಬಿ ವರ್ಗದ ಭೂ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ತಹಶೀಲ್ದಾರ್ ಕಚೇರಿಯಲ್ಲಿ ವಿತರಣೆ ಮಾಡುವಲ್ಲಿ ವಿಶೇಷವಾಗಿ ಗಮನ ಸೆಳೆದರೂ
ಜಾತಿ ಮತ್ತು ಆದಾಯ ಪತ್ರ ಹಾಗೂ ವಿವಿಧ ಕಂದಾಯ ದಾಖಲೆಗಳನ್ನು ಪಡೆಯಲು ಪ್ರತಿ ನಿತ್ಯ ಸಾವಿರಾರು ಜನರು ತಾಲೂಕು ಕಚೇರಿಯತ್ತ ಅಲೆದಾಡಬೇಕಿತ್ತು ಆದರೆ ಇವರು ಸಾರ್ವಜನಿಕರ ಅಲೆದಾಟವನ್ನು ತಪ್ಪಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ವಿಭಿನ್ನವಾಗಿ ತಮ್ಮ ಅವಧಿಯಲ್ಲಿ ಕಡಿಮೆ ಸಮಯದಲ್ಲಿ ತ್ವರಿತ ದಾಖಲೆಗಳನ್ನು ಪಡೆಯಲು ಸಮಯದ ವೇಳಾ ಪಟ್ಟಿಯನ್ನು ನಿಗಧಿ ಮಾಡುವ ಮೂಲಕ ವ್ಯವಸ್ಥಿತವಾಗಿ ಆಡಳಿತ ಸುಧಾರಣೆಯನ್ನು ಮಾಡಿದರು ಒಟ್ಟಾರೆ ತಹಸೀಲ್ದಾರ್ ಗ್ರೇಡ್ 2 ಆಗಿ ತಮ್ಮ ಕರ್ತವ್ಯವನ್ನು ಅತ್ಯಂತ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಣೆ ಮಾಡುವ ಮೂಲಕ ಜನಸ್ನೇಹಿ ವಾತಾವರಣವನ್ನು ಸೃಷ್ಟಿಸಿದ ಇವರ ಕಾರ್ಯವೈಖರಿಗೆ ಮೆಚ್ಚುಗೆಯ ಜೊತೆಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ವರದಿ : ಚಿಕ್ಕತೇಕಹಳ್ಳಿ ಡಿ ಶಿವಕುಮಾರ್ ಶಿಡ್ಲಘಟ್ಟ

VK NEWS DIGITAL : 

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ