LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲೀಡ್ಸ್​ನಲ್ಲಿ ಭಾರತ​ ಗೆದ್ದಿದ್ದೆಷ್ಟು? ಇಲ್ಲಿ ಯಾರು ಬಲಿಷ್ಠ​?

ಭಾರತ-ಇಂಗ್ಲೆಂಡ್ ತಂಡಗಳ ನಡುವಿನ 5 ಪಂದ್ಯಗಳ ಟೆಸ್ಟ್​ ಸರಣಿಯ ಮೊದಲ ಪಂದ್ಯ ಇಂದು ಶುರುವಾಗಲಿದೆ. ಇದರೊಂದಿಗೆ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ 2025-2027ರ ಋತು ಕೂಡಾ ಪ್ರಾರಂಭವಾಗುತ್ತದೆ. ಉಭಯ ತಂಡಗಳ ನಡುವಿನ ಮಹತ್ವದ ಹಣಾಹಣಿಗೆ ಲೀಡ್ಸ್‌ನ ಹೆಡಿಂಗ್ಲಿ ಮೈದಾನ ಆತಿಥ್ಯ ವಹಿಸಿದೆ.


ಭಾರತ ಕೊನೆಯ ಬಾರಿಗೆ 2007ರಲ್ಲಿ ರಾಹುಲ್​ ದ್ರಾವಿಡ್​ ನಾಯಕತ್ವದಲ್ಲಿ ಇಂಗ್ಲೆಂಡ್​ ನೆಲದಲ್ಲಿ ಟೆಸ್ಟ್​ ಸರಣಿ ಜಯಿಸಿತ್ತು. ಆ ಬಳಿಕ ಒಮ್ಮೆಯೂ ಸರಣಿ ಗೆಲ್ಲಲು ಸಾಧ್ಯವಾಗಿಲ್ಲ. ಇದೀಗ ಗಿಲ್​ ನಾಯಕತ್ವದಲ್ಲಿ ಟೆಸ್ಟ್ ಸರಣಿ ಗೆಲ್ಲಲು ತವಕಿಸುತ್ತಿದೆ.


ಲೀಡ್ಸ್​ ಮೈದಾನದಲ್ಲಿ ಉಭಯ​ ತಂಡಗಳ ದಾಖಲೆ ಹೇಗಿದೆ?. ಇಲ್ಲಿ ಇದುವರೆಗೂ ಆಡಿರುವ ​ಪಂದ್ಯಗಳೆಷ್ಟು? ಯಾರು ಹೆಚ್ಚು ಗೆಲುವು ಸಾಧಿಸಿದ್ದಾರೆ? ಎಂಬುದನ್ನು ಈಗ ತಿಳಿಯೋಣ.


ಹೆಡಿಂಗ್ಲೆ ಮೈದಾನದ ಇತಿಹಾಸ: ಹೆಡಿಂಗ್ಲೆ ಮೈದಾನದಲ್ಲಿ ಇದುವರೆಗೂ 81 ಟೆಸ್ಟ್​ ಪಂದ್ಯಗಳು ನಡೆದಿವೆ. ಮೊಟ್ಟಮೊದಲ ಪಂದ್ಯ 1899ರಲ್ಲಿ ನಡೆದಿತ್ತು. ಅಂದಿನಿಂದಲೂ ಈ ಮೈದಾನ ಕೆಲವು ಅದ್ಭುತ ಪ್ರದರ್ಶನಗಳಿಗೆ ಸಾಕ್ಷಿಯಾಗಿದೆ


, ಇಲ್ಲಿ ಇಂಗ್ಲೆಂಡ್ 37 ಪಂದ್ಯಗಳನ್ನು ಗೆದ್ದರೆ, ಪ್ರವಾಸಿ ತಂಡಗಳು ಕೇವಲ 25 ಪಂದ್ಯಗಳನ್ನು ಗೆದ್ದಿವೆ. ಟಾಸ್ ಗೆದ್ದಿರುವ ತಂಡಗಳೇ ಹೆಚ್ಚು ಗೆಲುವು ಸಾಧಿಸಿರುವ ದಾಖಲೆಗಳಿವೆ. ಹಾಗಾಗಿ, ಟಾಸ್​ ನಿರ್ಣಾಯಕ ಪಾತ್ರ ವಹಿಸುತ್ತದೆ. ಇಲ್ಲಿ ಮೊದಲು ಬ್ಯಾಟಿಂಗ್​ ಮಾಡಿದ ತಂಡಗಳು 29 ಪಂದ್ಯಗಳನ್ನು ಗೆದ್ದುಕೊಂಡಿದ್ದರೆ, ಚೇಸಿಂಗ್​ ತಂಡಗಳು 37 ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ.

ಲೀಡ್ಸ್‌ನಲ್ಲಿ ಭಾರತದ ಸೋಲು-ಗೆಲುವg: ಭಾರತ 1952ರಲ್ಲಿ ಲೀಡ್ಸ್‌ನಲ್ಲಿ​ ಮೊದಲ ಟೆಸ್ಟ್​ ಪಂದ್ಯ ಆಡಿತ್ತು. ಆದರೆ ಈ ಪಂದ್ಯದಲ್ಲಿ 7 ವಿಕೆಟ್​ಗಳ ಸೋಲು ಕಂಡಿತ್ತು. 1986ರಲ್ಲಿ ಕಪಿಲ್​ ದೇವ್​ ಮತ್ತು 2002ರಲ್ಲಿ ಸೌರವ್​ ಗಂಗೂಲಿ ನಾಯಕತ್ವದಲ್ಲಿ ಮಾತ್ರ ಗೆದ್ದಿದೆ. ಕೊನೆಯದಾಗಿ ವಿರಾಟ್​ ಕೊಹ್ಲಿ ನಾಯಕತ್ವದಲ್ಲಿ 2021ರಲ್ಲಿ ಟೆಸ್ಟ್​ ಪಂದ್ಯವನ್ನಾಡಿ 76 ರನ್​ಗಳಿಂದ ಸೋಲುಂಡಿತ್ತು.


ಇಂಗ್ಲೆಂಡ್​ ದಾಖಲೆ: ಇಂಗ್ಲೆಂಡ್​ ಇಲ್ಲಿ ಭಾರತದ ವಿರುದ್ಧ ಒಟ್ಟು 4 ಬಾರಿ (1952, 1959, 1967 ಮತ್ತು 2021) ಗೆದ್ದಿದೆ. ಉಭಯ ತಂಡಗಳ ನಡುವೆ 1979ರಲ್ಲಿ ನಡೆದ ಒಂದು ಪಂದ್ಯ ಡ್ರಾನಲ್ಲಿ ಕೊನೆಗೊಂಡಿತ್ತು

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ